<p><strong>ಕಲಬುರಗಿ</strong>: 'ರಾಜ್ಯದಲ್ಲಿ ಘೋಷಿಸಿರುವಂತೆ ಜಿಲ್ಲೆಯಲ್ಲೂ ಪ್ರತಿ ಟನ್ ಕಬ್ಬಿಗೆ ₹3300 ದರ ನಿಗದಿ ಮಾಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘಗಳ ಒಕ್ಕೂಟದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಗುತ್ತಿದೆ.</p><p>ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ವಾಹನಗಳ ಸಂಚಾರ ತಡೆದು ಸರ್ಕಾರ ಹಾಗೂ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p><p>'ರಾಜ್ಯ ಸರ್ಕಾರ ಕಬ್ಬು ದರ ನಿಗದಿ ವಿಷಯದಲ್ಲಿ ಕಲಬುರಗಿ ರೈತರೊಂದಿಗೆ ಮಲತಾಯಿ ಧೋರಣೆ ತೋರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಸಭೆ ನಡೆಸಿ ಪ್ರತಿ ಟನ್ ಕಬ್ಬಿಗೆ ₹3300 ದರ ನಿಗದಿ ಮಾಡಿದ ಬಳಿಕವೂ ಜಿಲ್ಲಾಡಳಿತ ಹಾಗೂ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಆ ದರವನ್ನು ನೀಡಲು ಮೀನಮೇಷ ಎನಿಸುತ್ತಿವೆ' ಎಂದು ಆರೋಪಿಸಿದರು.</p><p>'ಜಿಲ್ಲೆಯ ಅಫಜಲಪುರದಲ್ಲಿ ಕಬ್ಬು ಬೆಳೆಗಾರರು ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸುತ್ತಿದ್ದ ವೇಳೆ ಜಿಲ್ಲಾಡಳಿತ ಹಾಗೂ ಕ್ಷೇತ್ರದ ಶಾಸಕರು ಭೇಟಿ ಕೊಟ್ಟಿದ್ದರು. ಪ್ರತಿ ಟನ್ ಕಬ್ಬಿಗೆ ₹3160 ದರ ನೀಡಲು ಕಾರ್ಖಾನೆಗಳು ಒಪ್ಪಿವೆ. ಅಷ್ಟು ದರ ನೀಡದಿದ್ದರೆ ಕಾರ್ಖಾನೆ ಆರಂಭಿಸಲು ಅವಕಾಶವೇ ಎಂದು ಭರವಸೆ ನೀಡಿದ್ದರಿಂದ ನಾವೆಲ್ಲ ಹೋರಾಟ ಕೈ ಬಿಟ್ಟಿದ್ದೇವೆ. ಇದೀಗ ಆ ದರವನ್ನು ನೋಡಲು ಒಪ್ಪದೇ ₹3 ಸಾವಿರಕ್ಕೂ ಕಡಿಮೆ ದರ ನೀಡಲು ಮುಂದಾಗಿರುವುದು ಖಂಡನೀಯ' ಎಂದು ಅಸಮಾಧಾನ ವ್ಯಕ್ತಪಡಿಸಿದರು.</p><p><strong>ಜಿಲ್ಲಾಡಳಿತದೊಂದಿಗೆ ವಾಗ್ವಾದ:</strong> ಪ್ರತಿಭಟನೆ ನಿರತರ ಮನವಿ ಸ್ವೀಕರಿಸಲು ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹಾಗೂ ಆಹಾರ ಇಲಾಖೆ ಉಪನಿರ್ದೇಶಕ ಭೀಮರಾಯ ಅವರೊಂದಿಗೆ ಪ್ರತಿಭಟನಕಾರರು ಕಬ್ಬಿನ ದರ ನಿಗದಿಗೆ ಸಂಬಂಧಿಸಿದಂತೆ ವಾಗ್ವಾದ ನಡೆಸಿದರು.</p><p>'ಜಿಲ್ಲಾಡಳಿತವು ಸಕ್ಕರೆ ಕಾರ್ಖಾನೆಗಳ ಒತ್ತಡಕ್ಕೆ ಮಣಿದಿವೆ. ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳ ಅಧಿಕಾರಿಗಳು ಪರಸ್ಪರ ಶಾಮೀಲಾಗಿದ್ದಾರೆ' ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: 'ರಾಜ್ಯದಲ್ಲಿ ಘೋಷಿಸಿರುವಂತೆ ಜಿಲ್ಲೆಯಲ್ಲೂ ಪ್ರತಿ ಟನ್ ಕಬ್ಬಿಗೆ ₹3300 ದರ ನಿಗದಿ ಮಾಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘಗಳ ಒಕ್ಕೂಟದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಗುತ್ತಿದೆ.</p><p>ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ವಾಹನಗಳ ಸಂಚಾರ ತಡೆದು ಸರ್ಕಾರ ಹಾಗೂ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p><p>'ರಾಜ್ಯ ಸರ್ಕಾರ ಕಬ್ಬು ದರ ನಿಗದಿ ವಿಷಯದಲ್ಲಿ ಕಲಬುರಗಿ ರೈತರೊಂದಿಗೆ ಮಲತಾಯಿ ಧೋರಣೆ ತೋರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಸಭೆ ನಡೆಸಿ ಪ್ರತಿ ಟನ್ ಕಬ್ಬಿಗೆ ₹3300 ದರ ನಿಗದಿ ಮಾಡಿದ ಬಳಿಕವೂ ಜಿಲ್ಲಾಡಳಿತ ಹಾಗೂ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಆ ದರವನ್ನು ನೀಡಲು ಮೀನಮೇಷ ಎನಿಸುತ್ತಿವೆ' ಎಂದು ಆರೋಪಿಸಿದರು.</p><p>'ಜಿಲ್ಲೆಯ ಅಫಜಲಪುರದಲ್ಲಿ ಕಬ್ಬು ಬೆಳೆಗಾರರು ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸುತ್ತಿದ್ದ ವೇಳೆ ಜಿಲ್ಲಾಡಳಿತ ಹಾಗೂ ಕ್ಷೇತ್ರದ ಶಾಸಕರು ಭೇಟಿ ಕೊಟ್ಟಿದ್ದರು. ಪ್ರತಿ ಟನ್ ಕಬ್ಬಿಗೆ ₹3160 ದರ ನೀಡಲು ಕಾರ್ಖಾನೆಗಳು ಒಪ್ಪಿವೆ. ಅಷ್ಟು ದರ ನೀಡದಿದ್ದರೆ ಕಾರ್ಖಾನೆ ಆರಂಭಿಸಲು ಅವಕಾಶವೇ ಎಂದು ಭರವಸೆ ನೀಡಿದ್ದರಿಂದ ನಾವೆಲ್ಲ ಹೋರಾಟ ಕೈ ಬಿಟ್ಟಿದ್ದೇವೆ. ಇದೀಗ ಆ ದರವನ್ನು ನೋಡಲು ಒಪ್ಪದೇ ₹3 ಸಾವಿರಕ್ಕೂ ಕಡಿಮೆ ದರ ನೀಡಲು ಮುಂದಾಗಿರುವುದು ಖಂಡನೀಯ' ಎಂದು ಅಸಮಾಧಾನ ವ್ಯಕ್ತಪಡಿಸಿದರು.</p><p><strong>ಜಿಲ್ಲಾಡಳಿತದೊಂದಿಗೆ ವಾಗ್ವಾದ:</strong> ಪ್ರತಿಭಟನೆ ನಿರತರ ಮನವಿ ಸ್ವೀಕರಿಸಲು ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹಾಗೂ ಆಹಾರ ಇಲಾಖೆ ಉಪನಿರ್ದೇಶಕ ಭೀಮರಾಯ ಅವರೊಂದಿಗೆ ಪ್ರತಿಭಟನಕಾರರು ಕಬ್ಬಿನ ದರ ನಿಗದಿಗೆ ಸಂಬಂಧಿಸಿದಂತೆ ವಾಗ್ವಾದ ನಡೆಸಿದರು.</p><p>'ಜಿಲ್ಲಾಡಳಿತವು ಸಕ್ಕರೆ ಕಾರ್ಖಾನೆಗಳ ಒತ್ತಡಕ್ಕೆ ಮಣಿದಿವೆ. ಸರ್ಕಾರ ಹಾಗೂ ಸಕ್ಕರೆ ಕಾರ್ಖಾನೆಗಳ ಅಧಿಕಾರಿಗಳು ಪರಸ್ಪರ ಶಾಮೀಲಾಗಿದ್ದಾರೆ' ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>