<p><strong>ಕಲಬುರ್ಗಿ</strong>: ಮಹಾನಗರ ಪಾಲಿಕೆಯ 377 ದಿನಗೂಲಿ ಪೌರ ಕಾರ್ಮಿಕರನ್ನು ಕಾಯಂಗೊಳಿಸದೆ ಬೇರೆ ಪೌರ ಕಾರ್ಮಿಕರನ್ನು ನೇಮಕ ಮಾಡಿದ್ದನ್ನು ಖಂಡಿಸಿ, ಪೌರ ಕಾರ್ಮಿಕರ ಹೋರಾಟ ಸಮಿತಿ ನೇತೃತ್ವದಲ್ಲಿ ಸೋಮವಾರ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾವಣೆಗೊಂದ ಪೌರಕಾರ್ಮಿಕರು ಅಧಿಕಾರಿಗಳ ಕ್ರಮಕ್ಕೆ ಆಕ್ರೋಶ ಹೊರಹಾಕಿದರು.</p>.<p>ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ 377 ಪೌರ ಕಾರ್ಮಿಕರು 26 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇವು. ನಮ್ಮಲ್ಲಿ ಈಗಾಗಲೇ ಹಲವಾರು ಪೌರ ಕಾರ್ಮಿಕರು ಮರಣ ಹೊಂದಿದ್ದಾರೆ. ಉಳಿದವರು ಇನ್ನೂ ದುಡಿಯುತ್ತಿದ್ದೇವೆ. ನಮ್ಮನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿದರು.</p>.<p>ಪೌರಕಾರ್ಮಿಕರನ್ನು ಕಾಯಂಗೊಳಿಸುವಂತೆ ಸಾಕಷ್ಟು ಬಾರಿ ಹೋರಾಟ ಮಾಡಿ ಜೈಲಿಗೆ ಹೋಗಿ ಬಂದಿದ್ದೇವೆ. ಹೋರಾಟ ಸಂದರ್ಭದಲ್ಲಿ ಪಾಲಿಕೆಯ ದಿನಗೂಲಿ ಪೌರ ಕಾರ್ಮಿಕರೆಂದು ನ್ಯಾಯಾಲಯ ಆದೇಶ ನೀಡಿದೆ. ಆದರೂ ಅಧಿಕಾರಿಗಳು ಆದೇಶ ಪಾಲಿಸಿಲ್ಲ ಎಂದೂ ದೂರಿದರು.</p>.<p>ಈ ಹಿಂದೆ ಜಿಲ್ಲಾ ಮಟ್ಟದಲ್ಲಿ ಅನೇಕ ಸಭೆಗಳು ನಡೆದಿದ್ದು, 377 ಪೌರ ಕಾರ್ಮಿಕರನ್ನು ಕಾಯಂಗೊಳಿಸುವ ಸಂದರ್ಭದಲ್ಲಿ ಸೇವೆ ಪರಿಗಣಿಸಿ ಕಾಯಂ ನೇಮಕ ಮಾಡಿಕೊಳ್ಳಬೇಕು ಎಂದು ನಿಯಮ ಮಾಡಲಾಗಿದೆ. ಆದರೆ, ಏ.6ರಂದು ತಾತ್ಕಾಲಿಕ ಪಟ್ಟಿ ಪ್ರಕಟಿಸಿದ್ದು, ಇದರಲ್ಲಿ ನಮ್ಮನ್ನು ಕೈ ಬಿಡಲಾಗಿದೆ ಎಂದೂ ಹೇಳಿದರು.</p>.<p>ಜಿಲ್ಲಾಧಿಕಾರಿ ಕೂಡಲೇ ಮಧ್ಯಪ್ರವೇಶಿಸಿ ಪೌರಕಾರ್ಮಿಕರ ನೇರ ನೇಮಕಾತಿ ಮತ್ತು ನೇರ ಪಾವತಿ ತಾತ್ಕಾಲಿಕ ಪಟ್ಟಿ ರದ್ದುಪಡಿಸಿ 377 ದಿನಗೂಲಿ ಪೌರಕಾರ್ಮಿಕ ಸೇವೆ ಪರಿಗಣಿಸಿ ಕಾಯಂ ಮಾಡಬೇಕು ಎಂದು ಒತ್ತಾಯಿಸಿದರು. ಬೇಡಿಕೆ ಈಡೇರಿಸಬೇಕು ಎಂದು ಅವರು ಆಗ್ರಹಿಸಿದರು.</p>.<p>ಮುಖಂಡರಾದ ಅರ್ಜುನ ಭದ್ರೆ, ಮರೆಪ್ಪ ಹಳ್ಳಿ, ಮಲ್ಲೇಶ ಸಜ್ಜನ, ಸೂರ್ಯಕಾಂತ ನಿಂಬಾಳಕರ್, ಸಂತೋಷ ಮೇಲ್ಮನಿ, ಹಣಮಂತ ಇಟಗಿ, ದಶರಥ ಕಲಬುರ್ಗಿ ಮುಂತಾದವರು ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ಮಹಾನಗರ ಪಾಲಿಕೆಯ 377 ದಿನಗೂಲಿ ಪೌರ ಕಾರ್ಮಿಕರನ್ನು ಕಾಯಂಗೊಳಿಸದೆ ಬೇರೆ ಪೌರ ಕಾರ್ಮಿಕರನ್ನು ನೇಮಕ ಮಾಡಿದ್ದನ್ನು ಖಂಡಿಸಿ, ಪೌರ ಕಾರ್ಮಿಕರ ಹೋರಾಟ ಸಮಿತಿ ನೇತೃತ್ವದಲ್ಲಿ ಸೋಮವಾರ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾವಣೆಗೊಂದ ಪೌರಕಾರ್ಮಿಕರು ಅಧಿಕಾರಿಗಳ ಕ್ರಮಕ್ಕೆ ಆಕ್ರೋಶ ಹೊರಹಾಕಿದರು.</p>.<p>ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ 377 ಪೌರ ಕಾರ್ಮಿಕರು 26 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇವು. ನಮ್ಮಲ್ಲಿ ಈಗಾಗಲೇ ಹಲವಾರು ಪೌರ ಕಾರ್ಮಿಕರು ಮರಣ ಹೊಂದಿದ್ದಾರೆ. ಉಳಿದವರು ಇನ್ನೂ ದುಡಿಯುತ್ತಿದ್ದೇವೆ. ನಮ್ಮನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿದರು.</p>.<p>ಪೌರಕಾರ್ಮಿಕರನ್ನು ಕಾಯಂಗೊಳಿಸುವಂತೆ ಸಾಕಷ್ಟು ಬಾರಿ ಹೋರಾಟ ಮಾಡಿ ಜೈಲಿಗೆ ಹೋಗಿ ಬಂದಿದ್ದೇವೆ. ಹೋರಾಟ ಸಂದರ್ಭದಲ್ಲಿ ಪಾಲಿಕೆಯ ದಿನಗೂಲಿ ಪೌರ ಕಾರ್ಮಿಕರೆಂದು ನ್ಯಾಯಾಲಯ ಆದೇಶ ನೀಡಿದೆ. ಆದರೂ ಅಧಿಕಾರಿಗಳು ಆದೇಶ ಪಾಲಿಸಿಲ್ಲ ಎಂದೂ ದೂರಿದರು.</p>.<p>ಈ ಹಿಂದೆ ಜಿಲ್ಲಾ ಮಟ್ಟದಲ್ಲಿ ಅನೇಕ ಸಭೆಗಳು ನಡೆದಿದ್ದು, 377 ಪೌರ ಕಾರ್ಮಿಕರನ್ನು ಕಾಯಂಗೊಳಿಸುವ ಸಂದರ್ಭದಲ್ಲಿ ಸೇವೆ ಪರಿಗಣಿಸಿ ಕಾಯಂ ನೇಮಕ ಮಾಡಿಕೊಳ್ಳಬೇಕು ಎಂದು ನಿಯಮ ಮಾಡಲಾಗಿದೆ. ಆದರೆ, ಏ.6ರಂದು ತಾತ್ಕಾಲಿಕ ಪಟ್ಟಿ ಪ್ರಕಟಿಸಿದ್ದು, ಇದರಲ್ಲಿ ನಮ್ಮನ್ನು ಕೈ ಬಿಡಲಾಗಿದೆ ಎಂದೂ ಹೇಳಿದರು.</p>.<p>ಜಿಲ್ಲಾಧಿಕಾರಿ ಕೂಡಲೇ ಮಧ್ಯಪ್ರವೇಶಿಸಿ ಪೌರಕಾರ್ಮಿಕರ ನೇರ ನೇಮಕಾತಿ ಮತ್ತು ನೇರ ಪಾವತಿ ತಾತ್ಕಾಲಿಕ ಪಟ್ಟಿ ರದ್ದುಪಡಿಸಿ 377 ದಿನಗೂಲಿ ಪೌರಕಾರ್ಮಿಕ ಸೇವೆ ಪರಿಗಣಿಸಿ ಕಾಯಂ ಮಾಡಬೇಕು ಎಂದು ಒತ್ತಾಯಿಸಿದರು. ಬೇಡಿಕೆ ಈಡೇರಿಸಬೇಕು ಎಂದು ಅವರು ಆಗ್ರಹಿಸಿದರು.</p>.<p>ಮುಖಂಡರಾದ ಅರ್ಜುನ ಭದ್ರೆ, ಮರೆಪ್ಪ ಹಳ್ಳಿ, ಮಲ್ಲೇಶ ಸಜ್ಜನ, ಸೂರ್ಯಕಾಂತ ನಿಂಬಾಳಕರ್, ಸಂತೋಷ ಮೇಲ್ಮನಿ, ಹಣಮಂತ ಇಟಗಿ, ದಶರಥ ಕಲಬುರ್ಗಿ ಮುಂತಾದವರು ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>