‘ಅಸ್ಸಾಂನಲ್ಲಿ ಬಲವಂತದ ತೆರವು ಕಾರ್ಯಾಚರಣೆ ನಡೆದಿದೆ. ಇದರಿಂದ 4,500 ಬಡ ಹಾಗೂ ಅಸಹಾಯಕ ಜನ ಬೀದಿಪಾಲಾಗುತ್ತಾರೆ. ಇದನ್ನು ಖಂಡಿಸಿ ಸಾಮಾನ್ಯ ಜನರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ, ಅವರ ಹಕ್ಕು ಕಸಿದುಕೊಳ್ಳುವ ಉದ್ದೇಶದಿಂದ ಮಹಿಳೆಯರು, ಮಕ್ಕಳು, ವೃದ್ಧರ ಮೇಲೂ ಪೊಲೀಸರು ಮನಸೋ ಇಚ್ಚೆ ಹೊಡೆದಿದ್ದಾರೆ. ಗೋಲಿಬಾರ್ ಮಾಡಿ ಅಮಾಯಕರನ್ನು ಕೊಲೆ ಮಾಡಿದ್ದಾರೆ’ ಎಂದೂ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.