<p><strong>ಕಾಳಗಿ</strong>: ‘ಕಲಬುರ್ಗಿ ಜಿಲ್ಲೆಯಲ್ಲಿ ಕೂಡಲೇ ತೊಗರಿ ಖರೀದಿ ಕೇಂದ್ರ ಆರಂಭಿಸಬೇಕು. ಪ್ರತಿ ಕ್ವಿಂಟಲ್ ತೊಗರಿಗೆ ₹8750 ಬೆಂಬಲ ಬೆಲೆ ನೀಡಬೇಕು’ ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ತಾಲ್ಲೂಕಿನ ಕೋಡ್ಲಿ ಕ್ರಾಸ್ನಲ್ಲಿ ಗುರುವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.</p>.<p>‘ಜಿಲ್ಲೆಯಾದ್ಯಂತ ತೊಗರಿ ರಾಶಿ ನಡೆಯುತ್ತಿವೆ. ಇದೇ ಸಮಯಕ್ಕೆ ಖರೀದಿ ಕೇಂದ್ರ ತೆರೆದರೆ ಸೂಕ್ತ ಎನಿಸುತ್ತದೆ. ಆದರೆ ಸರ್ಕಾರ ಇನ್ನೂ ಖರೀದಿ ಕೇಂದ್ರ ತೆರೆದಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಡಾ.ಎಂ.ಎಸ್.ಸ್ವಾಮಿನಾಥನ್ ಆಯೋಗದ ವರದಿ ಶಿಫಾರಸ್ಸಿನಂತೆ ಪ್ರತಿ ಕ್ವಿಂಟಲ್ ತೊಗರಿಗೆ ₹8750 ಬೆಂಬಲ ಬೆಲೆ ನಿಗದಿಪಡಿಸಬೇಕು. ಹೊರದೇಶದ ತೊಗರಿ ಮೇಲೆ ಶೇ 30ರಷ್ಟು ಆಮದು ಸುಂಕ ಹಾಕಬೇಕು. ರೈತರು ಬೆಳೆದ ತೊಗರಿಯನ್ನು ಸರ್ಕಾರ ಸಂಪೂರ್ಣವಾಗಿ ಖರೀದಿ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ತೊಗರಿ ಖರೀದಿಗೆ ರೈತರ ಹೆಸರು ನೋಂದಣಿ ದಿನಾಂಕವನ್ನು ವಿಸ್ತರಿಸಬೇಕು. ಪ್ರತಿ ಕ್ವಿಂಟಲ್ ತೊಗರಿಗೆ ರಾಜ್ಯ ಸರ್ಕಾರ ₹2000 ಪ್ರೋತ್ಸಾಹ ಧನ ಕೊಡಬೇಕು. ಅತಿವೃಷ್ಟಿಯಿಂದ ಬೆಳೆ ಹಾಳಾದ ರೈತರಿಗೆ ಪರಿಹಾರ ನೀಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೃಷಿಗೆ ಸಂಬಂಧಿಸಿದ ಮೂರು ಕಾನೂನುಗಳನ್ನು ವಾಪಸ್ ಪಡೆಯಬೇಕು’ ಎಂದು ಒತ್ತಾಯಿಸಿದರು.</p>.<p>ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಹೋಬಳಿ ಸಂಚಾಲಕ ಗುರುನಂದೇಶ ಕೋಣಿನ, ಮುಖಂಡರಾದ ಪರಮೇಶ್ವರ ಕಾಂತಾ, ರಾಮಚಂದ್ರ ಮುಕರಂಬಿ, ಶಿವಕುಮಾರ ಪ್ಯಾಟಿಮನಿ, ಸಿದ್ದಯ್ಯ ಅಲ್ಲಾಪುರ, ಶಿವಕುಮಾರ ಪಾಟೀಲ, ನಾಗಯ್ಯಸ್ವಾಮಿ, ಮಲ್ಲು ಚಿಕ್ಕ ಅಗಸಿ ಇದ್ದರು.</p>.<p>ಸರ್ಕಾರಕ್ಕೆ ಬರೆಯಲಾದ ಮನವಿ ಪತ್ರವನ್ನು ಸ್ಥಳಕ್ಕೆ ಭೇಟಿ ನೀಡಿದ ಎಪಿಎಂಸಿ ಕಾರ್ಯದರ್ಶಿ ಸವಿತಾ ಪವಾರ ಅವರಿಗೆ ಸಲ್ಲಿಸಲಾಯಿತು. ಕೆಲಕಾಲ ಕಲಬುರ್ಗಿ- ಚಿಂಚೋಳಿ ಮಾರ್ಗ ಸ್ಥಗಿತಗೊಂಡಿದ್ದರಿಂದ ವಾಹನ ಸವಾರರು ಪರದಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಳಗಿ</strong>: ‘ಕಲಬುರ್ಗಿ ಜಿಲ್ಲೆಯಲ್ಲಿ ಕೂಡಲೇ ತೊಗರಿ ಖರೀದಿ ಕೇಂದ್ರ ಆರಂಭಿಸಬೇಕು. ಪ್ರತಿ ಕ್ವಿಂಟಲ್ ತೊಗರಿಗೆ ₹8750 ಬೆಂಬಲ ಬೆಲೆ ನೀಡಬೇಕು’ ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ತಾಲ್ಲೂಕಿನ ಕೋಡ್ಲಿ ಕ್ರಾಸ್ನಲ್ಲಿ ಗುರುವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.</p>.<p>‘ಜಿಲ್ಲೆಯಾದ್ಯಂತ ತೊಗರಿ ರಾಶಿ ನಡೆಯುತ್ತಿವೆ. ಇದೇ ಸಮಯಕ್ಕೆ ಖರೀದಿ ಕೇಂದ್ರ ತೆರೆದರೆ ಸೂಕ್ತ ಎನಿಸುತ್ತದೆ. ಆದರೆ ಸರ್ಕಾರ ಇನ್ನೂ ಖರೀದಿ ಕೇಂದ್ರ ತೆರೆದಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಡಾ.ಎಂ.ಎಸ್.ಸ್ವಾಮಿನಾಥನ್ ಆಯೋಗದ ವರದಿ ಶಿಫಾರಸ್ಸಿನಂತೆ ಪ್ರತಿ ಕ್ವಿಂಟಲ್ ತೊಗರಿಗೆ ₹8750 ಬೆಂಬಲ ಬೆಲೆ ನಿಗದಿಪಡಿಸಬೇಕು. ಹೊರದೇಶದ ತೊಗರಿ ಮೇಲೆ ಶೇ 30ರಷ್ಟು ಆಮದು ಸುಂಕ ಹಾಕಬೇಕು. ರೈತರು ಬೆಳೆದ ತೊಗರಿಯನ್ನು ಸರ್ಕಾರ ಸಂಪೂರ್ಣವಾಗಿ ಖರೀದಿ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ತೊಗರಿ ಖರೀದಿಗೆ ರೈತರ ಹೆಸರು ನೋಂದಣಿ ದಿನಾಂಕವನ್ನು ವಿಸ್ತರಿಸಬೇಕು. ಪ್ರತಿ ಕ್ವಿಂಟಲ್ ತೊಗರಿಗೆ ರಾಜ್ಯ ಸರ್ಕಾರ ₹2000 ಪ್ರೋತ್ಸಾಹ ಧನ ಕೊಡಬೇಕು. ಅತಿವೃಷ್ಟಿಯಿಂದ ಬೆಳೆ ಹಾಳಾದ ರೈತರಿಗೆ ಪರಿಹಾರ ನೀಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೃಷಿಗೆ ಸಂಬಂಧಿಸಿದ ಮೂರು ಕಾನೂನುಗಳನ್ನು ವಾಪಸ್ ಪಡೆಯಬೇಕು’ ಎಂದು ಒತ್ತಾಯಿಸಿದರು.</p>.<p>ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಹೋಬಳಿ ಸಂಚಾಲಕ ಗುರುನಂದೇಶ ಕೋಣಿನ, ಮುಖಂಡರಾದ ಪರಮೇಶ್ವರ ಕಾಂತಾ, ರಾಮಚಂದ್ರ ಮುಕರಂಬಿ, ಶಿವಕುಮಾರ ಪ್ಯಾಟಿಮನಿ, ಸಿದ್ದಯ್ಯ ಅಲ್ಲಾಪುರ, ಶಿವಕುಮಾರ ಪಾಟೀಲ, ನಾಗಯ್ಯಸ್ವಾಮಿ, ಮಲ್ಲು ಚಿಕ್ಕ ಅಗಸಿ ಇದ್ದರು.</p>.<p>ಸರ್ಕಾರಕ್ಕೆ ಬರೆಯಲಾದ ಮನವಿ ಪತ್ರವನ್ನು ಸ್ಥಳಕ್ಕೆ ಭೇಟಿ ನೀಡಿದ ಎಪಿಎಂಸಿ ಕಾರ್ಯದರ್ಶಿ ಸವಿತಾ ಪವಾರ ಅವರಿಗೆ ಸಲ್ಲಿಸಲಾಯಿತು. ಕೆಲಕಾಲ ಕಲಬುರ್ಗಿ- ಚಿಂಚೋಳಿ ಮಾರ್ಗ ಸ್ಥಗಿತಗೊಂಡಿದ್ದರಿಂದ ವಾಹನ ಸವಾರರು ಪರದಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>