<p><strong>ಕಲಬುರಗಿ:</strong> ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್ಡಿಐಎಲ್) ಆಳಂದ ತಾಲ್ಲೂಕಿನ ನಿಂಬರ್ಗಾ ಗ್ರಾಮದಲ್ಲಿ ₹ 26 ಲಕ್ಷ ಅನುದಾನದಲ್ಲಿ ಕೈಗೆತ್ತಿಕೊಂಡಿರುವ ಸಾಮೂಹಿಕ ಮಹಿಳಾ ಶೌಚಾಲಯ ನಿರ್ಮಾಣ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸರ್ವ ಸಮಾಜ ಕಲ್ಯಾಣ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರು ನಗರದ ಕೆಆರ್ಡಿಐಎಲ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. </p>.<p>‘ಕಾಮಗಾರಿ ಬುನಾದಿ ಹಂತದಲ್ಲಿಯೇ ಸ್ಥಗಿತಗೊಂಡಿದೆ. ಕೇಳಿದರೆ ಇಂದು–ನಾಳೆ ಎಂದು ಸುಳ್ಳು ಹೇಳುತ್ತಿದ್ದಾರೆ. ಇದರಿಂದ ಗ್ರಾಮಸ್ಥರಿಗೆ ತೊಂದರೆಯಾಗಿದೆ. ಸಂಬಂಧಪಟ್ಟ ಎಂಜಿನಿಯರ್ಗಳನ್ನು ಅಮಾನತು ಮಾಡಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಗುತ್ತಿಗೆದಾರರ ಪರವಾನಗಿ ರದ್ದು ಮಾಡಬೇಕು. ಅರ್ಧಕ್ಕೆ ನಿಂತ ಕಾಮಗಾರಿಯನ್ನು ಆರಂಭಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸಮಿತಿಯ ಅಧ್ಯಕ್ಷ ವಿಠಲ್ ಸಿ.ಕೋಣೆಕರ, ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ದುಗೊಂಡ, ಬಹುಜನ ಹೋರಾಟ ಸಮಿತಿ ಅಧ್ಯಕ್ಷ ರವಿ ಕೋರಿ, ಪರಮೇಶ್ವರ ಶಿವಗೊಂಡಗೋಳ, ಸೂರ್ಯಕಾಂತ, ರಾಮು ಗೋಡ್ಕೆ, ವಿಲಾಸ ಪಿರೋಜಿ, ರಾಮು ದೇವಕರ, ಮುಕುಂದ ಬನ್ನಪಟ್ಟಿ, ವಿಠ್ಠಲ ಕಟ್ಟಿಮನಿ, ಪ್ರಕಾಶ ಸರ್ವೋದಯ, ಚಂದ್ರಯ್ಯ ಮಠಪತಿ ಹಾಗೂ ಮಹಿಳೆಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್ಡಿಐಎಲ್) ಆಳಂದ ತಾಲ್ಲೂಕಿನ ನಿಂಬರ್ಗಾ ಗ್ರಾಮದಲ್ಲಿ ₹ 26 ಲಕ್ಷ ಅನುದಾನದಲ್ಲಿ ಕೈಗೆತ್ತಿಕೊಂಡಿರುವ ಸಾಮೂಹಿಕ ಮಹಿಳಾ ಶೌಚಾಲಯ ನಿರ್ಮಾಣ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸರ್ವ ಸಮಾಜ ಕಲ್ಯಾಣ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರು ನಗರದ ಕೆಆರ್ಡಿಐಎಲ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. </p>.<p>‘ಕಾಮಗಾರಿ ಬುನಾದಿ ಹಂತದಲ್ಲಿಯೇ ಸ್ಥಗಿತಗೊಂಡಿದೆ. ಕೇಳಿದರೆ ಇಂದು–ನಾಳೆ ಎಂದು ಸುಳ್ಳು ಹೇಳುತ್ತಿದ್ದಾರೆ. ಇದರಿಂದ ಗ್ರಾಮಸ್ಥರಿಗೆ ತೊಂದರೆಯಾಗಿದೆ. ಸಂಬಂಧಪಟ್ಟ ಎಂಜಿನಿಯರ್ಗಳನ್ನು ಅಮಾನತು ಮಾಡಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಗುತ್ತಿಗೆದಾರರ ಪರವಾನಗಿ ರದ್ದು ಮಾಡಬೇಕು. ಅರ್ಧಕ್ಕೆ ನಿಂತ ಕಾಮಗಾರಿಯನ್ನು ಆರಂಭಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸಮಿತಿಯ ಅಧ್ಯಕ್ಷ ವಿಠಲ್ ಸಿ.ಕೋಣೆಕರ, ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ದುಗೊಂಡ, ಬಹುಜನ ಹೋರಾಟ ಸಮಿತಿ ಅಧ್ಯಕ್ಷ ರವಿ ಕೋರಿ, ಪರಮೇಶ್ವರ ಶಿವಗೊಂಡಗೋಳ, ಸೂರ್ಯಕಾಂತ, ರಾಮು ಗೋಡ್ಕೆ, ವಿಲಾಸ ಪಿರೋಜಿ, ರಾಮು ದೇವಕರ, ಮುಕುಂದ ಬನ್ನಪಟ್ಟಿ, ವಿಠ್ಠಲ ಕಟ್ಟಿಮನಿ, ಪ್ರಕಾಶ ಸರ್ವೋದಯ, ಚಂದ್ರಯ್ಯ ಮಠಪತಿ ಹಾಗೂ ಮಹಿಳೆಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>