‘ಕೇಂದ್ರ ಸರ್ಕಾರದ ಸರ್ವಾಧಿಕಾರದ ನೀತಿ ಖಂಡಿಸಿದ್ದಕ್ಕೆ ಖರ್ಗೆ ಅವರಿಗೆ ಬಿಜೆಪಿ, ಆರ್ಎಸ್ಎಸ್, ಭಜರಂಗ ದಳದಂತಹ ಸಂಘಟನೆಯವರು ಬೆದರಿಕೆ ಒಡ್ಡುತ್ತಿದ್ದಾರೆ. ತಪ್ಪಿತಸ್ಥರನ್ನು ಪತ್ತೆ ಮಾಡಿ, ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು’ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.