<p><strong>ಕಲಬುರ್ಗಿ: </strong>ಕಲ್ಯಾಣ ಕರ್ನಾಟಕ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ನಡೆದ ಪ್ರತಿಭಟನೆ ವೇಳೆ, ಜೇವರ್ಗಿ ತಾಲ್ಲೂಕು ಸುಂಬಡ ಗ್ರಾಮದ ಸಿದ್ಧಗಂಗಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರಕಾಶ ಸುಂಬಡ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದರು.</p>.<p>ಸೇಡಂನವಿಶ್ವಗಂಗಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಬಿರಾದರ (49) ಅವರು ಸಾಲ ಬಾಧೆ ತಾಳದೇ ಕಲಬುರ್ಗಿಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಾವಿಗೆ ಸರ್ಕಾರದ ಧೋರಣೆಯೇ ಕಾರಣ ಎಂದು ಆರೋಪಿಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.</p>.<p>ಮಧ್ಯಾಹ್ನದವರೆಗೂಜಿಲ್ಲಾಧಿಕಾರಿ, ಜನಪ್ರತಿನಿಧಿಗಳು ಸ್ಥಳಕ್ಕೆ ಬರಲಿಲ್ಲ. ಇದರಿಂದ ಪ್ರತಿಭಟನಾಕಾರರು ತೀವ್ರ ಆಕ್ರೋಶಗೊಂಡರು. ನಂತರ ಬಂದ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಪ್ರತಿಭಟನಾಕಾರರ ದೂರು ಆಲಿಸುತ್ತಿದ್ದರು.</p>.<p>ಪ್ರತಿಭಟನೆಯಲ್ಲಿದ್ದ ಪ್ರಕಾಶ, ಬೈಕ್ನಲ್ಲಿ ಮಾರುಕಟ್ಟೆಗೆ ಹೋಗಿ ಕ್ರಿಮಿನಾಶಕ ತಂದು ಕುಡಿದರು. ಎರಡು ಗುಟುಕು ಕುಡಿಯುತ್ತಿದ್ದಂತೆ ಜೊತೆಗಿದ್ದವರು ಬಾಟಲಿ ಕಿತ್ತಿಕೊಂಡರೂ ಬಿಡದೇ ತಲೆ– ಮುಖದ ಮೇಲೆಲ್ಲ ಚೆಲ್ಲಾಡಿಕೊಂಡರು. ಅಸ್ವಸ್ಥರಾದ ಅವರನ್ನು ಪೊಲೀಸ್ ವಾಹನದಲ್ಲೇ ಜಿಮ್ಸ್ಗೆ ದಾಖಲಿಸಲಾಯಿತು.</p>.<p>ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವೇತನಾನುದಾನ ನೀಡಬೇಕು ಎಂದು ಆಗ್ರಹಿಸಿ ಒಕ್ಕೂಟದಿಂದ ನಿರಂತರ ಹೋರಾಟ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಕಲ್ಯಾಣ ಕರ್ನಾಟಕ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ನಡೆದ ಪ್ರತಿಭಟನೆ ವೇಳೆ, ಜೇವರ್ಗಿ ತಾಲ್ಲೂಕು ಸುಂಬಡ ಗ್ರಾಮದ ಸಿದ್ಧಗಂಗಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರಕಾಶ ಸುಂಬಡ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದರು.</p>.<p>ಸೇಡಂನವಿಶ್ವಗಂಗಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಬಿರಾದರ (49) ಅವರು ಸಾಲ ಬಾಧೆ ತಾಳದೇ ಕಲಬುರ್ಗಿಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಾವಿಗೆ ಸರ್ಕಾರದ ಧೋರಣೆಯೇ ಕಾರಣ ಎಂದು ಆರೋಪಿಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.</p>.<p>ಮಧ್ಯಾಹ್ನದವರೆಗೂಜಿಲ್ಲಾಧಿಕಾರಿ, ಜನಪ್ರತಿನಿಧಿಗಳು ಸ್ಥಳಕ್ಕೆ ಬರಲಿಲ್ಲ. ಇದರಿಂದ ಪ್ರತಿಭಟನಾಕಾರರು ತೀವ್ರ ಆಕ್ರೋಶಗೊಂಡರು. ನಂತರ ಬಂದ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಪ್ರತಿಭಟನಾಕಾರರ ದೂರು ಆಲಿಸುತ್ತಿದ್ದರು.</p>.<p>ಪ್ರತಿಭಟನೆಯಲ್ಲಿದ್ದ ಪ್ರಕಾಶ, ಬೈಕ್ನಲ್ಲಿ ಮಾರುಕಟ್ಟೆಗೆ ಹೋಗಿ ಕ್ರಿಮಿನಾಶಕ ತಂದು ಕುಡಿದರು. ಎರಡು ಗುಟುಕು ಕುಡಿಯುತ್ತಿದ್ದಂತೆ ಜೊತೆಗಿದ್ದವರು ಬಾಟಲಿ ಕಿತ್ತಿಕೊಂಡರೂ ಬಿಡದೇ ತಲೆ– ಮುಖದ ಮೇಲೆಲ್ಲ ಚೆಲ್ಲಾಡಿಕೊಂಡರು. ಅಸ್ವಸ್ಥರಾದ ಅವರನ್ನು ಪೊಲೀಸ್ ವಾಹನದಲ್ಲೇ ಜಿಮ್ಸ್ಗೆ ದಾಖಲಿಸಲಾಯಿತು.</p>.<p>ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವೇತನಾನುದಾನ ನೀಡಬೇಕು ಎಂದು ಆಗ್ರಹಿಸಿ ಒಕ್ಕೂಟದಿಂದ ನಿರಂತರ ಹೋರಾಟ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>