<p><strong>ಕಲಬುರಗಿ</strong>: ಈಶ್ವರಚಂದ್ರ ವಿದ್ಯಾಸಾಗರ ಅವರ ಸ್ಮರಣ ದಿನದ ಅಂಗವಾಗಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (ಎಐಎಸ್ಇಸಿ) ವತಿಯಿಂದ ಸಾರ್ವಜನಿಕ ಶಿಕ್ಷಣ ಉಳಿಸಿ ದಿನ ಆಚರಿಸಲಾಯಿತು.</p>.<p>ಇದೇ ವೇಳೆ ನೂತನ ಶಿಕ್ಷಣ ನೀತಿ ವಿರೋಧಿಸಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾ ಸಮಿತಿ ಕಾರ್ಯದರ್ಶಿ ರಾಮಣ್ಣ ಎಸ್.ಇಬ್ರಾಹಿಂಪುರ ಮಾತನಾಡಿ, ‘ನೂತನ ಶಿಕ್ಷಣ ನೀತಿ ಜನವಿರೋಧಿಯಾಗಿದೆ. ಇದರಹಿಂದೆಶಿಕ್ಷಣಕ್ಷೇತ್ರವನ್ನು ಹಾಳುಮಾ ಡುವಹುನ್ನಾರ ಅಡಗಿದೆ. ಬಂಡವಾಳಶಾಹಿಗಳ ಸೇವೆಗಾಗಿ ವಿದ್ಯಾರ್ಥಿಗಳನ್ನು ಬಲಿಪಶು ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>ಶಿಕ್ಷಣ ನೀತಿಗಳು ಎಲ್ಲರಿಗೂ ಶಿಕ್ಷಣ ದೊರಕಿಸುವ ಉದ್ದೇಶ ಹೊಂದಿರಬೇಕು. ಆದರೆ ನೂತನ ನೀತಿ ಬಡವರಿಗೆ ಶಿಕ್ಷಣ ಕ್ಷೇತ್ರದ ಬಾಗಿಲುಗಳನ್ನು ಮುಚ್ಚುತ್ತದೆ. ಚರ್ಚೆ ಇಲ್ಲ ದೆ ಕಾಯ್ದೆಗಳನ್ನು ಜಾರಿಗೆ ತಂದರೆ ಇಂಥ ಅಪಾಯ ಆಗುವ ಸಾಧ್ಯತೆ ಇರುತ್ತದೆ. ಈ ಹುನ್ನಾರದ ವಿರುದ್ಧ ಎಲ್ಲರೂ ಒಗ್ಗೂಡಬೇಕು. ಪ್ರತಿಭಟಿಸಬೇಕು ಎಂದು ಹೇಳಿದರು.</p>.<p>ಜಿಲ್ಲಾ ಸಮಿತಿ ಸದಸ್ಯರಾದ ವಿಶಾಲಾಕ್ಷಿ ಪಾಟೀಲ, ಜಾನಕಿ ಎಸ್.ಗುದ್ದಿ, ಶಿವಕುಮಾರ ಕುಸಾಳೆ ಹಾಗೂ ವಿಜಯಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಈಶ್ವರಚಂದ್ರ ವಿದ್ಯಾಸಾಗರ ಅವರ ಸ್ಮರಣ ದಿನದ ಅಂಗವಾಗಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (ಎಐಎಸ್ಇಸಿ) ವತಿಯಿಂದ ಸಾರ್ವಜನಿಕ ಶಿಕ್ಷಣ ಉಳಿಸಿ ದಿನ ಆಚರಿಸಲಾಯಿತು.</p>.<p>ಇದೇ ವೇಳೆ ನೂತನ ಶಿಕ್ಷಣ ನೀತಿ ವಿರೋಧಿಸಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾ ಸಮಿತಿ ಕಾರ್ಯದರ್ಶಿ ರಾಮಣ್ಣ ಎಸ್.ಇಬ್ರಾಹಿಂಪುರ ಮಾತನಾಡಿ, ‘ನೂತನ ಶಿಕ್ಷಣ ನೀತಿ ಜನವಿರೋಧಿಯಾಗಿದೆ. ಇದರಹಿಂದೆಶಿಕ್ಷಣಕ್ಷೇತ್ರವನ್ನು ಹಾಳುಮಾ ಡುವಹುನ್ನಾರ ಅಡಗಿದೆ. ಬಂಡವಾಳಶಾಹಿಗಳ ಸೇವೆಗಾಗಿ ವಿದ್ಯಾರ್ಥಿಗಳನ್ನು ಬಲಿಪಶು ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.</p>.<p>ಶಿಕ್ಷಣ ನೀತಿಗಳು ಎಲ್ಲರಿಗೂ ಶಿಕ್ಷಣ ದೊರಕಿಸುವ ಉದ್ದೇಶ ಹೊಂದಿರಬೇಕು. ಆದರೆ ನೂತನ ನೀತಿ ಬಡವರಿಗೆ ಶಿಕ್ಷಣ ಕ್ಷೇತ್ರದ ಬಾಗಿಲುಗಳನ್ನು ಮುಚ್ಚುತ್ತದೆ. ಚರ್ಚೆ ಇಲ್ಲ ದೆ ಕಾಯ್ದೆಗಳನ್ನು ಜಾರಿಗೆ ತಂದರೆ ಇಂಥ ಅಪಾಯ ಆಗುವ ಸಾಧ್ಯತೆ ಇರುತ್ತದೆ. ಈ ಹುನ್ನಾರದ ವಿರುದ್ಧ ಎಲ್ಲರೂ ಒಗ್ಗೂಡಬೇಕು. ಪ್ರತಿಭಟಿಸಬೇಕು ಎಂದು ಹೇಳಿದರು.</p>.<p>ಜಿಲ್ಲಾ ಸಮಿತಿ ಸದಸ್ಯರಾದ ವಿಶಾಲಾಕ್ಷಿ ಪಾಟೀಲ, ಜಾನಕಿ ಎಸ್.ಗುದ್ದಿ, ಶಿವಕುಮಾರ ಕುಸಾಳೆ ಹಾಗೂ ವಿಜಯಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>