‘ಒಂದು ತಿಂಗಳಿನಿಂದ ರೇಣುಕಾ ಸಕ್ಕರೆ ಕಾರ್ಖಾನೆಗೆ ರೈತರು ಕಬ್ಬು ಪೂರೈಸುತ್ತಿದ್ದಾರೆ. ಆದರೆ, ಈವರೆಗೆ ಕಾರ್ಖಾನೆಯವರು ಕಬ್ಬಿಗೆ ಬೆಲೆ ನಿಗದಿ ಮಾಡಿಲ್ಲ. ಸಕ್ಕರೆ ಕಾರ್ಖಾನೆಯವರು ರೈತರಿಗೆ ವಂಚಿಸುತ್ತಿದ್ದಾರೆ. ಬೆಲೆ ನಿಗದಿ ಮಾಡುವಂತೆ ಈಗಾಗಲೇ ರಾಜ್ಯ, ಜಿಲ್ಲೆ, ತಾಲ್ಲೂಕುಗಳಲ್ಲಿ ಹೋರಾಟ, ಧರಣಿ ನಡೆಸಿದರೂ ಸರಿಯಾಗಿ ಸ್ಪಂದಿಸುತ್ತಿಲ್ಲ. ಇದು ಒಳ್ಳೆಯ ಬೆಳವಣಿಗೆಯಲ್ಲ’ ಎಂದು ಅವರು ಎಚ್ಚರಿಕೆ ನೀಡಿದರು.