<p><strong>ಕಲಬುರಗಿ:</strong> ‘ಕನ್ನಡ ಅತ್ಯಂತ ಶ್ರೀಮಂತ ಭಾಷೆ. ಅದನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮದಾಗಿದೆ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮುಳೇಗಾಂವ ಅಭಿಪ್ರಾಯಪಟ್ಟರು.</p>.<p>ನಗರದ ಶರಣಬಸವೇಶ್ವರ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ದ್ವಿತೀಯ ಪಿಯುಸಿ ಕನ್ನಡ ಮೌಲ್ಯಮಾಪನ ಮುಕ್ತಾಯ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಉಪನ್ಯಾಸಕರು ಕ್ರಿಯಾಶೀರಾಗಿರಬೇಕು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಹೊಸದನ್ನು ಕಲಿತು, ಹೊಸದನ್ನು ಕಲಿಸಬೇಕು. ಕನ್ನಡ ಭಾಷೆಯನ್ನು ಪ್ರೀತಿಸಿ, ಅದನ್ನು ಬೆಳೆಸಿ ಉಳಿಸಬೇಕು. ಇದು ಕನ್ನಡಿಗರ ಜವಾಬ್ದಾರಿ’ ಎಂದರು.</p>.<p>ಮೌಲ್ಯಮಾಪನ ಕೇಂದ್ರದ ಮುಖ್ಯ ಪರೀಕ್ಷಕ ಚಂದ್ರಕಾಂತ ಬಿರಾದಾರ, ಮೌಲ್ಯಮಾಪನ ಕೇಂದ್ರದ ವೀಕ್ಷಕ ಅರುಣಕುಮಾರ ಪಾಟೀಲ ಮಾತನಾಡಿದರು. ಎಸ್ಬಿಆರ್ ಕಾಲೇಜಿನ ಪ್ರಾಚಾರ್ಯ ಶ್ರೀಶೈಲ ಹೊಗಾಡೆ ಅಧ್ಯಕ್ಷತೆ ವಹಿಸಿದ್ದರು.</p>.<p>ಕಾರ್ಯಕ್ರಮದಲ್ಲಿ ಪಿಯು ಕಾಲೇಜಿನ ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಯ ಸೇವಾ ನಿವೃತ್ತಿಗೊಳ್ಳುತ್ತಿರುವ ಉಪನ್ಯಾಸಕರು ಹಾಗೂ ಪ್ರಾಚಾರ್ಯರಾದ ಗೌಸುದ್ದೀನ್ ತುಮಕೂರಕರ್, ಜಗದೀಶ್ ಬಿಜಾಪುರೆ, ವೈಜನಾಥ ಕಾಳೆ ಅವರನ್ನು ಸನ್ಮಾನಿಸಲಾಯಿತು.</p>.<p>ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯರಾಗಿ ನೇಮಕಗೊಂಡ ಸತ್ಯಂ ಪಿಯು ಕಾಲೇಜಿನ ಪ್ರಾಚಾರ್ಯ ಬಿ.ಎಚ್.ನಿರಗುಡಿ ಅವರನ್ನು ಗೌರವಿಸಲಾಯಿತು. ವಿಜಯಕುಮಾರ್ ರೋಣದ ನಿರೂಪಿಸಿದರು. ಮನ್ಮಥ ವಂದಿಸಿದರು.</p>.<p>ಕಾರ್ಯಕ್ರಮದಲ್ಲಿ 300ಕ್ಕೂ ಹೆಚ್ಚು ಉಪನ್ಯಾಸಕರು, ಪ್ರಾಚಾರ್ಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ಕನ್ನಡ ಅತ್ಯಂತ ಶ್ರೀಮಂತ ಭಾಷೆ. ಅದನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮದಾಗಿದೆ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮುಳೇಗಾಂವ ಅಭಿಪ್ರಾಯಪಟ್ಟರು.</p>.<p>ನಗರದ ಶರಣಬಸವೇಶ್ವರ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ದ್ವಿತೀಯ ಪಿಯುಸಿ ಕನ್ನಡ ಮೌಲ್ಯಮಾಪನ ಮುಕ್ತಾಯ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಉಪನ್ಯಾಸಕರು ಕ್ರಿಯಾಶೀರಾಗಿರಬೇಕು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಹೊಸದನ್ನು ಕಲಿತು, ಹೊಸದನ್ನು ಕಲಿಸಬೇಕು. ಕನ್ನಡ ಭಾಷೆಯನ್ನು ಪ್ರೀತಿಸಿ, ಅದನ್ನು ಬೆಳೆಸಿ ಉಳಿಸಬೇಕು. ಇದು ಕನ್ನಡಿಗರ ಜವಾಬ್ದಾರಿ’ ಎಂದರು.</p>.<p>ಮೌಲ್ಯಮಾಪನ ಕೇಂದ್ರದ ಮುಖ್ಯ ಪರೀಕ್ಷಕ ಚಂದ್ರಕಾಂತ ಬಿರಾದಾರ, ಮೌಲ್ಯಮಾಪನ ಕೇಂದ್ರದ ವೀಕ್ಷಕ ಅರುಣಕುಮಾರ ಪಾಟೀಲ ಮಾತನಾಡಿದರು. ಎಸ್ಬಿಆರ್ ಕಾಲೇಜಿನ ಪ್ರಾಚಾರ್ಯ ಶ್ರೀಶೈಲ ಹೊಗಾಡೆ ಅಧ್ಯಕ್ಷತೆ ವಹಿಸಿದ್ದರು.</p>.<p>ಕಾರ್ಯಕ್ರಮದಲ್ಲಿ ಪಿಯು ಕಾಲೇಜಿನ ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಯ ಸೇವಾ ನಿವೃತ್ತಿಗೊಳ್ಳುತ್ತಿರುವ ಉಪನ್ಯಾಸಕರು ಹಾಗೂ ಪ್ರಾಚಾರ್ಯರಾದ ಗೌಸುದ್ದೀನ್ ತುಮಕೂರಕರ್, ಜಗದೀಶ್ ಬಿಜಾಪುರೆ, ವೈಜನಾಥ ಕಾಳೆ ಅವರನ್ನು ಸನ್ಮಾನಿಸಲಾಯಿತು.</p>.<p>ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯರಾಗಿ ನೇಮಕಗೊಂಡ ಸತ್ಯಂ ಪಿಯು ಕಾಲೇಜಿನ ಪ್ರಾಚಾರ್ಯ ಬಿ.ಎಚ್.ನಿರಗುಡಿ ಅವರನ್ನು ಗೌರವಿಸಲಾಯಿತು. ವಿಜಯಕುಮಾರ್ ರೋಣದ ನಿರೂಪಿಸಿದರು. ಮನ್ಮಥ ವಂದಿಸಿದರು.</p>.<p>ಕಾರ್ಯಕ್ರಮದಲ್ಲಿ 300ಕ್ಕೂ ಹೆಚ್ಚು ಉಪನ್ಯಾಸಕರು, ಪ್ರಾಚಾರ್ಯರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>