ಮಹಾಂತೇಶ ಪಾಟೀಲ, ವಿಶಾಲ್ ಶಿರೂರ, ಹಯ್ಯಾಳಿ ದೇಸಾಯಿ,ಸಿಎಆರ್ ಪೊಲೀಸ್ ಕಾನ್ಸ್ಟೆಬಲ್ ರುದ್ರಗೌಡ ಪಾಟೀಲ ಅವರನ್ನು ಶನಿವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನಾಲ್ವರನ್ನೂ ಏ. 29ರವರೆಗೆ ಸಿಐಡಿ ಕಸ್ಟಡಿಗೆ ವಹಿಸಲಾಗಿದೆ. ಎಲ್ಲರನ್ನೂ ವಿಚಾರಣೆ ನಡೆಸಿದ ಅಧಿಕಾರಿಗಳು, ರಾತ್ರಿ 10ರ ನಂತರ ಇಲ್ಲಿನ ಎಂ.ಬಿ.ನಗರ ಪೊಲೀಸ್ ಠಾಣೆಗೆ ಕರೆದೊಯ್ದರು.