ದಿವ್ಯಾ ಹಾಗರಗಿ ಒಡೆತನದ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಶಿಕ್ಷಕಿಯರಾದ ಅರ್ಚನಾ, ಸುನಿತಾ, ದಿವ್ಯಾ ಅವರಿಗೆ ಆಶ್ರಯ ನೀಡಿದ್ದ, ಮಹಾರಾಷ್ಟ್ರದ ಸೊಲ್ಲಾಪುರದ ಮರಳು ವ್ಯಾಪಾರಿಗಳಾದ ಸುರೇಶ ಕಾಟೇಗಾಂವ ಹಾಗೂ ಕಾಳಿದಾಸ ಬಂಧಿತರು. ಎಲ್ಲರನ್ನೂ ಗುರುವಾರ ಮಧ್ಯರಾತ್ರಿ ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಯಿತು ಎಂದು ಸಿಐಡಿ ಅಧಿಕಾರಿಗಳು ಮಾಹಿತಿ ನೀಡಿದರು.