<p><strong>ಕಲಬುರ್ಗಿ: </strong>ಭೀಮಾ ನದಿ ಪ್ರವಾಹದ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಪ್ರಚಾರ ಪಡೆಯಲು ಮೇಕೆ ಮರಿಯನ್ನು ರಕ್ಷಿಸಿದಂತೆ ನಕಲಿ ಕಾರ್ಯಾಚರಣೆ ನಡೆಸಿದ ಜೇವರ್ಗಿ ತಾಲ್ಲೂಕಿನ ನೆಲೋಗಿ ಠಾಣೆ ಪಿಎಸ್ಐ ಮಲ್ಲಣ್ಣ ಯಲಗೋಡ ಅವರನ್ನು ಎಸ್ಪಿ ಡಾ.ಸಿಮಿ ಮರಿಯಮ್ ಜಾರ್ಜ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.</p>.<p>'ಮೇಕೆ ಮರಿಯನ್ನು ತನ್ನಿ. ಅದನ್ನು ರಕ್ಷಣೆ ಮಾಡಿದಂತೆ ಮಾಡುತ್ತೇನೆ. ಅದನ್ನು ಟಿ.ವಿ. ಪತ್ರಿಕೆಗಳಿಗೆ ಕೊಡೋಣ' ಎಂದು ಗ್ರಾಮಸ್ಥರಿಗೆ ಹೇಳಿದ್ದ ವಿಡಿಯೊ ವೈರಲ್ ಆಗಿತ್ತು. ಇದು ಜಿಲ್ಲಾ ಪೊಲೀಸ್ ಇಲಾಖೆಗೆ ಮುಜುಗರ ಉಂಟು ಮಾಡಿತ್ತು.</p>.<p>ಕೆಲ ತಿಂಗಳ ಹಿಂದೆ ಕೊರೊನಾ ಲಾಕ್ ಡೌನ್ ಸಮಯದಲ್ಲಿಯೂ ನಿಯಮಾವಳಿ ಉಲ್ಲಂಘಿಸಿ ಜನ್ಮದಿನದ ಸಂದರ್ಭದಲ್ಲಿ ಅಭಿಮಾನಿಗಳಿಂದ ಹಾಕಿನ ಅಭಿಷೇಕ ಮಾಡಿಸಿಕೊಂಡಿದ್ದರು. ಆಗಲೂ ಅವರನ್ನು ಅಮಾನತು ಮಾಡಲಾಗಿತ್ತು.</p>.<p>ಕರ್ತವ್ಯದಲ್ಲಿ ಅಶಿಸ್ತು ತೋರಿಸಿದ ಕಾರಣಕ್ಕೆ ಮಲ್ಲಣ್ಣ ಯಲಗೋಡ ಅವರನ್ನು ಅಮಾನತುಗೊಳಿಸಿದ್ದೇನೆ. ಅವರ ಜಾಗಕ್ಕೆ ಜೇವರ್ಗಿ ಠಾಣೆ ಪಿಎಸ್ಐ ಸಂಗಮೇಶ ಅವರನ್ನು ವರ್ಗಾಯಿಸಲಾಗಿದೆ ಎಂದು ಡಾ.ಸಿಮಿ 'ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಭೀಮಾ ನದಿ ಪ್ರವಾಹದ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಪ್ರಚಾರ ಪಡೆಯಲು ಮೇಕೆ ಮರಿಯನ್ನು ರಕ್ಷಿಸಿದಂತೆ ನಕಲಿ ಕಾರ್ಯಾಚರಣೆ ನಡೆಸಿದ ಜೇವರ್ಗಿ ತಾಲ್ಲೂಕಿನ ನೆಲೋಗಿ ಠಾಣೆ ಪಿಎಸ್ಐ ಮಲ್ಲಣ್ಣ ಯಲಗೋಡ ಅವರನ್ನು ಎಸ್ಪಿ ಡಾ.ಸಿಮಿ ಮರಿಯಮ್ ಜಾರ್ಜ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.</p>.<p>'ಮೇಕೆ ಮರಿಯನ್ನು ತನ್ನಿ. ಅದನ್ನು ರಕ್ಷಣೆ ಮಾಡಿದಂತೆ ಮಾಡುತ್ತೇನೆ. ಅದನ್ನು ಟಿ.ವಿ. ಪತ್ರಿಕೆಗಳಿಗೆ ಕೊಡೋಣ' ಎಂದು ಗ್ರಾಮಸ್ಥರಿಗೆ ಹೇಳಿದ್ದ ವಿಡಿಯೊ ವೈರಲ್ ಆಗಿತ್ತು. ಇದು ಜಿಲ್ಲಾ ಪೊಲೀಸ್ ಇಲಾಖೆಗೆ ಮುಜುಗರ ಉಂಟು ಮಾಡಿತ್ತು.</p>.<p>ಕೆಲ ತಿಂಗಳ ಹಿಂದೆ ಕೊರೊನಾ ಲಾಕ್ ಡೌನ್ ಸಮಯದಲ್ಲಿಯೂ ನಿಯಮಾವಳಿ ಉಲ್ಲಂಘಿಸಿ ಜನ್ಮದಿನದ ಸಂದರ್ಭದಲ್ಲಿ ಅಭಿಮಾನಿಗಳಿಂದ ಹಾಕಿನ ಅಭಿಷೇಕ ಮಾಡಿಸಿಕೊಂಡಿದ್ದರು. ಆಗಲೂ ಅವರನ್ನು ಅಮಾನತು ಮಾಡಲಾಗಿತ್ತು.</p>.<p>ಕರ್ತವ್ಯದಲ್ಲಿ ಅಶಿಸ್ತು ತೋರಿಸಿದ ಕಾರಣಕ್ಕೆ ಮಲ್ಲಣ್ಣ ಯಲಗೋಡ ಅವರನ್ನು ಅಮಾನತುಗೊಳಿಸಿದ್ದೇನೆ. ಅವರ ಜಾಗಕ್ಕೆ ಜೇವರ್ಗಿ ಠಾಣೆ ಪಿಎಸ್ಐ ಸಂಗಮೇಶ ಅವರನ್ನು ವರ್ಗಾಯಿಸಲಾಗಿದೆ ಎಂದು ಡಾ.ಸಿಮಿ 'ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>