ಕಲಬುರಗಿ: ಪಿಎಸ್ಐ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಶಹಾಬಾದ್ ನಗರಸಭೆ ಸಿಬ್ಬಂದಿ ಜ್ಯೋತಿ ಪಾಟೀಲ ಎಂಬುವವರನ್ನು ಸಿಐಡಿ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.
ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿನ ಕೇಂದ್ರದಲ್ಲಿ ಪರೀಕ್ಷೆ ಬರೆದ ಸೇಡಂನ ಶಾಂತಿಬಾಯಿ ಬಸ್ಯನಾಯ್ಕ ಎಂಬುವವರಿಗೆ ಬ್ಲೂಟೂತ್ ಮೂಲಕ ಉತ್ತರ ಹೇಳುವಲ್ಲಿ ಸಹಕರಿಸಿದ ಆರೋಪ ಇವರ ಮೇಲಿದೆ.
ಮುಖ್ಯಮಂತ್ರಿ ಅವರ ಅಧೀನದಲ್ಲಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಕೆಲ ಕಾಲ ಕೆಲಸ ಮಾಡಿ ಇತ್ತೀಚೆಗೆ ಶಹಾಬಾದ್ ನಗರಸಭೆಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದರು ಎಂದು ಮೂಲಗಳು ತಿಳಿಸಿವೆ.