<p class="Briefhead"><strong>ಕಲಬುರಗಿ</strong>: ಪಿಎಸ್ಐ ಅಕ್ರಮ ನೇಮಕ ಕುರಿತು ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳ ತಂಡವು ಬುಧವಾರ ಜೇವರ್ಗಿ ತಾಲ್ಲೂಕಿನ ಸುಪ್ರಿಯಾ ಮಲ್ಲಿಕಾರ್ಜುನ ಹುಂಡೆಕರ್ (26) ಎಂಬುವರನ್ನು ವಶಕ್ಕೆ ಪಡೆದಿದೆ.</p>.<p>ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್ ಡಿವೈಸ್ ಬಳಸಿದ ಪ್ರಕರಣದಡಿ ಸುಪ್ರಿಯಾ ಅವರನ್ನು ಸಿಐಡಿ ತನಿಖಾಧಿಕಾರಿಗಳಾದ ಶಂಕರಗೌಡ ಪಾಟೀಲ, ಪ್ರಕಾಶ ರಾಠೋಡ ಅವರು ವಶಕ್ಕೆ ಪಡೆದಿದ್ದಾರೆ.</p>.<p>‘ಸರ್ಕಾರಿ ಪದವಿ ಕಾಲೇಜಿನಲ್ಲಿ ಬ್ಲೂಟೂತ್ ಡಿವೈಸ್ ಬಳಸಿ ಪಿಎಸ್ಐ ನೇಮಕ ಪರೀಕ್ಷೆ ಬರೆದ ಆರೋಪದಡಿ ದೂರು ದಾಖಲಾಗಿತ್ತು. ಈ ಬಗ್ಗೆ ನಡೆಸುತ್ತಿದ್ದ ತನಿಖೆಯಲ್ಲಿ ಸುಪ್ರಿಯಾ ಅವರ ಮೇಲಿದ್ದ ಸಂಶಯ ಖಚಿತವಾದ ಕಾರಣ ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದೇವೆ’ ಎಂದು ಸಿಐಡಿ ತನಿಖಾಧಿಕಾರಿ ಶಂಕರಗೌಡ ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Briefhead">ಉದ್ಯಮಿ ಮನೆಯಲ್ಲಿ ಐ.ಟಿ ಶೋಧ</p>.<p>ಬೆಂಗಳೂರು: ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯದ ಸಚಿವರೊಬ್ಬರ ಸಂಬಂಧಿಯಾಗಿರುವ ರಿಯಲ್ ಎಸ್ಟೇಟ್ ಉದ್ಯಮಿ ಚಂದ್ರಶೇಖರ್ ಎಂಬುವವರ ಮನೆಯ ಮೇಲೆ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ಮಾಡಿ ಶೋಧ ನಡೆಸಿದ್ದಾರೆ.</p>.<p>ಕಗ್ಗದಾಸಪುರದಲ್ಲಿರುವ ಚಂದ್ರಶೇಖರ್ ಮನೆಯ ಮೇಲೆ ದಾಳಿ ಮಾಡಿದ ಐ.ಟಿ ಅಧಿಕಾರಿಗಳು, ಹಲವು ಗಂಟೆಗಳ ಕಾಲ ಶೋಧ ನಡೆಸಿದರು. ರಿಯಲ್ ಎಸ್ಟೇಟ್ ವಹಿವಾಟು, ಬ್ಯಾಂಕ್ನಲ್ಲಿ ನಡೆಸಿರುವ ಹಣಕಾಸು ವಹಿವಾಟು, ತೆರಿಗೆ ಪಾವತಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p class="Briefhead">ಕಾರು ಬಾವಿಗೆ ಬಿದ್ದು ತಂದೆ, ಮಗ ಸಾವು</p>.<p>ಕಣ್ಣೂರು, ಕೇರಳ (ಪಿಟಿಐ): ಮಗನಿಗೆ ಕಾರು ಚಾಲನಾ ತರಬೇತಿ ನೀಡುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಮನೆಯ ಬಾವಿಗೆ ಬಿದ್ದುದರಿಂದ ತಂದೆ ಹಾಗೂ ಮಗ ಮೃತಪಟ್ಟಿರುವ ಘಟನೆ ಕೇರಳದ ಕಣ್ಣೂರಿನ ನೆಲ್ಲಿಕುನ್ನು ಗ್ರಾಮದಲ್ಲಿ ನಡೆದಿದೆ.</p>.<p>ಮನೆಯ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ತರಬೇತಿ ನೀಡುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ತಂದೆ ಮ್ಯಾಥುಕುಟ್ಟಿ (55) ಸ್ಥಳದಲ್ಲೇ ಮೃತಪಟ್ಟಿದ್ದು, ಪುತ್ರ ವೆನ್ಸ್ ಮ್ಯಾಥ್ಯೂಗೆ (18) ಹೆಚ್ಚಿನ ಗಾಯಗಳಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="Briefhead"><strong>ಕಲಬುರಗಿ</strong>: ಪಿಎಸ್ಐ ಅಕ್ರಮ ನೇಮಕ ಕುರಿತು ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳ ತಂಡವು ಬುಧವಾರ ಜೇವರ್ಗಿ ತಾಲ್ಲೂಕಿನ ಸುಪ್ರಿಯಾ ಮಲ್ಲಿಕಾರ್ಜುನ ಹುಂಡೆಕರ್ (26) ಎಂಬುವರನ್ನು ವಶಕ್ಕೆ ಪಡೆದಿದೆ.</p>.<p>ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್ ಡಿವೈಸ್ ಬಳಸಿದ ಪ್ರಕರಣದಡಿ ಸುಪ್ರಿಯಾ ಅವರನ್ನು ಸಿಐಡಿ ತನಿಖಾಧಿಕಾರಿಗಳಾದ ಶಂಕರಗೌಡ ಪಾಟೀಲ, ಪ್ರಕಾಶ ರಾಠೋಡ ಅವರು ವಶಕ್ಕೆ ಪಡೆದಿದ್ದಾರೆ.</p>.<p>‘ಸರ್ಕಾರಿ ಪದವಿ ಕಾಲೇಜಿನಲ್ಲಿ ಬ್ಲೂಟೂತ್ ಡಿವೈಸ್ ಬಳಸಿ ಪಿಎಸ್ಐ ನೇಮಕ ಪರೀಕ್ಷೆ ಬರೆದ ಆರೋಪದಡಿ ದೂರು ದಾಖಲಾಗಿತ್ತು. ಈ ಬಗ್ಗೆ ನಡೆಸುತ್ತಿದ್ದ ತನಿಖೆಯಲ್ಲಿ ಸುಪ್ರಿಯಾ ಅವರ ಮೇಲಿದ್ದ ಸಂಶಯ ಖಚಿತವಾದ ಕಾರಣ ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದೇವೆ’ ಎಂದು ಸಿಐಡಿ ತನಿಖಾಧಿಕಾರಿ ಶಂಕರಗೌಡ ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p class="Briefhead">ಉದ್ಯಮಿ ಮನೆಯಲ್ಲಿ ಐ.ಟಿ ಶೋಧ</p>.<p>ಬೆಂಗಳೂರು: ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯದ ಸಚಿವರೊಬ್ಬರ ಸಂಬಂಧಿಯಾಗಿರುವ ರಿಯಲ್ ಎಸ್ಟೇಟ್ ಉದ್ಯಮಿ ಚಂದ್ರಶೇಖರ್ ಎಂಬುವವರ ಮನೆಯ ಮೇಲೆ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ಮಾಡಿ ಶೋಧ ನಡೆಸಿದ್ದಾರೆ.</p>.<p>ಕಗ್ಗದಾಸಪುರದಲ್ಲಿರುವ ಚಂದ್ರಶೇಖರ್ ಮನೆಯ ಮೇಲೆ ದಾಳಿ ಮಾಡಿದ ಐ.ಟಿ ಅಧಿಕಾರಿಗಳು, ಹಲವು ಗಂಟೆಗಳ ಕಾಲ ಶೋಧ ನಡೆಸಿದರು. ರಿಯಲ್ ಎಸ್ಟೇಟ್ ವಹಿವಾಟು, ಬ್ಯಾಂಕ್ನಲ್ಲಿ ನಡೆಸಿರುವ ಹಣಕಾಸು ವಹಿವಾಟು, ತೆರಿಗೆ ಪಾವತಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p class="Briefhead">ಕಾರು ಬಾವಿಗೆ ಬಿದ್ದು ತಂದೆ, ಮಗ ಸಾವು</p>.<p>ಕಣ್ಣೂರು, ಕೇರಳ (ಪಿಟಿಐ): ಮಗನಿಗೆ ಕಾರು ಚಾಲನಾ ತರಬೇತಿ ನೀಡುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಮನೆಯ ಬಾವಿಗೆ ಬಿದ್ದುದರಿಂದ ತಂದೆ ಹಾಗೂ ಮಗ ಮೃತಪಟ್ಟಿರುವ ಘಟನೆ ಕೇರಳದ ಕಣ್ಣೂರಿನ ನೆಲ್ಲಿಕುನ್ನು ಗ್ರಾಮದಲ್ಲಿ ನಡೆದಿದೆ.</p>.<p>ಮನೆಯ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ತರಬೇತಿ ನೀಡುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ತಂದೆ ಮ್ಯಾಥುಕುಟ್ಟಿ (55) ಸ್ಥಳದಲ್ಲೇ ಮೃತಪಟ್ಟಿದ್ದು, ಪುತ್ರ ವೆನ್ಸ್ ಮ್ಯಾಥ್ಯೂಗೆ (18) ಹೆಚ್ಚಿನ ಗಾಯಗಳಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>