<p><strong>ಕಲಬುರಗಿ:</strong> ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ ಇಲ್ಲಿನ ಕೇಂದ್ರ ಕಾರಾಗೃಹದ ಸಿಬ್ಬಂದಿ ಜೊತೆಗೆ ಮತ್ತೆ ಕಿರಿಕ್ ಮಾಡಿಕೊಂಡಿದ್ದಾರೆ.</p><p>ಹಿರಿಯ ಅಧಿಕಾರಿಗಳ ಸೂಚನೆಯಂತೆ ಜೈಲು ಸಿಬ್ಬಂದಿ ಶನಿವಾರ ಬ್ಯಾರೆಕ್ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಜೈಲು ಸಿಬ್ಬಂದಿ ಜೊತೆಗೆ ತಗಾದೆ ತೆಗೆದ ಆರ್.ಡಿ.ಪಾಟೀಲ, ‘ನನ್ನ ಬ್ಯಾರೆಕ್ ತಪಾಸಣೆಗೆ ಅನುಮತಿ ಇದೆಯಾ?’ ಎಂದು ಪ್ರಶ್ನಿಸಿದ್ದಾನೆ. ಅನುಮತಿ ಇಲ್ಲದೇ ಬ್ಯಾರಕ್ ತಪಾಸಣೆಗೆ ಬಿಡಲ್ಲ ಎಂದು ವಾಗ್ವಾದ ನಡೆಸಿದ್ದ’ ಎಂದು ಮೂಲಗಳು ಹೇಳಿವೆ.</p><p>ಈ ಕುರಿತು ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಆರ್.ಅನಿತಾ ಅವರು ಫರಹತಾಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.</p><p>ಇತ್ತೀಚೆಗೆ ಸುಪ್ರೀಂ ಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದಿದ್ದ ಆರ್.ಡಿ.ಪಾಟೀಲ, ಜೈಲಿನಿಂದ ಬಿಡುಗಡೆಯಾಗುವ ಹೊತ್ತಲ್ಲೂ ಜೈಲಿನ ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡಿದ್ದ. ಪರಸ್ಪರ ವಾಗ್ವಾದ, ನೂಕಾಟ–ತಳ್ಳಾಟ ನಡೆದಿತ್ತು. ಈ ಕುರಿತು ಜೈಲು ಅಧಿಕಾರಿಗಳು ಹಾಗೂ ಆರ್.ಡಿ.ಪಾಟೀಲ ಪರಸ್ಪರರ ವಿರುದ್ಧ ನೀಡಿದ ದೂರುಗಳನ್ವಯ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ ಇಲ್ಲಿನ ಕೇಂದ್ರ ಕಾರಾಗೃಹದ ಸಿಬ್ಬಂದಿ ಜೊತೆಗೆ ಮತ್ತೆ ಕಿರಿಕ್ ಮಾಡಿಕೊಂಡಿದ್ದಾರೆ.</p><p>ಹಿರಿಯ ಅಧಿಕಾರಿಗಳ ಸೂಚನೆಯಂತೆ ಜೈಲು ಸಿಬ್ಬಂದಿ ಶನಿವಾರ ಬ್ಯಾರೆಕ್ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಜೈಲು ಸಿಬ್ಬಂದಿ ಜೊತೆಗೆ ತಗಾದೆ ತೆಗೆದ ಆರ್.ಡಿ.ಪಾಟೀಲ, ‘ನನ್ನ ಬ್ಯಾರೆಕ್ ತಪಾಸಣೆಗೆ ಅನುಮತಿ ಇದೆಯಾ?’ ಎಂದು ಪ್ರಶ್ನಿಸಿದ್ದಾನೆ. ಅನುಮತಿ ಇಲ್ಲದೇ ಬ್ಯಾರಕ್ ತಪಾಸಣೆಗೆ ಬಿಡಲ್ಲ ಎಂದು ವಾಗ್ವಾದ ನಡೆಸಿದ್ದ’ ಎಂದು ಮೂಲಗಳು ಹೇಳಿವೆ.</p><p>ಈ ಕುರಿತು ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಆರ್.ಅನಿತಾ ಅವರು ಫರಹತಾಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.</p><p>ಇತ್ತೀಚೆಗೆ ಸುಪ್ರೀಂ ಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದಿದ್ದ ಆರ್.ಡಿ.ಪಾಟೀಲ, ಜೈಲಿನಿಂದ ಬಿಡುಗಡೆಯಾಗುವ ಹೊತ್ತಲ್ಲೂ ಜೈಲಿನ ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡಿದ್ದ. ಪರಸ್ಪರ ವಾಗ್ವಾದ, ನೂಕಾಟ–ತಳ್ಳಾಟ ನಡೆದಿತ್ತು. ಈ ಕುರಿತು ಜೈಲು ಅಧಿಕಾರಿಗಳು ಹಾಗೂ ಆರ್.ಡಿ.ಪಾಟೀಲ ಪರಸ್ಪರರ ವಿರುದ್ಧ ನೀಡಿದ ದೂರುಗಳನ್ವಯ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>