ಕಳೆದ ಮೂರುವರೆ ತಿಂಗಳಿಂದ ಪೊಲೀಸರ ಕಣ್ಣುತಪ್ಪಿಸಿ ತಿರುಗಾಡುತ್ತಿದ್ದ ರಚನಾ ಒಂದೆಡೆ ನೆಲೆ ನಿಲ್ಲದೇ ಹಲವು ಕಡೆ ವಾಸ್ತವ್ಯ ಬದಲಾಯಿಸಿದ್ದರು. ಬೆಂಗಳೂರು, ಕಲಬುರಗಿ ಸಿಐಡಿ ಅಧಿಕಾರಿಗಳು ನಿರಂತರವಾಗಿ ಹುಡುಕಾಟ ನಡೆಸಿದ್ದರು. ಮಹಾರಾಷ್ಟ್ರ ಗಡಿಯಲ್ಲಿರುವ ಜಿಲ್ಲೆಯ ಆಳಂದ ತಾಲ್ಲೂಕಿನ ಹಿರೋಳ್ಳಿ ಚೆಕ್ಪೋಸ್ಟ್ ಬಳಿ ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಹಾಗೂ ಸಿಐಡಿ ಡಿಟೆಕ್ಟಿವ್ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ನೇತೃತ್ವದ ತಂಡವು ರಚನಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಶನಿವಾರ ನಗರದ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ದಸ್ತಗೀರಸಾಬ್ ಮುಲ್ಲಾ ಅವರ ಎದುರು ಆರೋಪಿಯನ್ನು ಹಾಜರುಪಡಿಸಲಾಯಿತು.