ಬುಧವಾರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರಿದ್ದ ನ್ಯಾಯಪೀಠವು ಸುರೇಶಗೆ ಜಾಮೀನು ನೀಡಿದೆ. ಆದರೆ, ರಾಜೇಶ್ ಅಕ್ರಮ ನಡೆದ ಪರೀಕ್ಷಾ ಕೇಂದ್ರವಿದ್ದ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿದ್ದರಿಂದ ಅವರಿಗೆ ಜಾಮೀನು ನೀಡುವುದು ಸೂಕ್ತವಲ್ಲ ಎಂದು ಸಿಐಡಿ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಪ್ರಕಾಶ ಎಲಿ ಅವರು ವಾದ ಮಂಡಿಸಿದರು.