<p><strong>ನವದೆಹಲಿ:</strong> ಪಿಎಸ್ಐ ಹಗರಣ ಹಾಗೂ ಕೆಇಎ ನೇಮಕಾತಿ ಪರೀಕ್ಷೆ ಬರೆಯಲು ಹಣ ಪಡೆದು ಬ್ಲೂಟೂತ್ ನೀಡಿದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಅವರಿಗೆ 21 ದಿನಗಳ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ನೀಡಿದೆ. </p>.<p>ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಇರುವ ಕಾರಣ ಮಧ್ಯಂತರ ಜಾಮೀನು ನೀಡಬೇಕೆಂದು ಪಾಟೀಲ ಅವರು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಹಾಗೂ ನ್ಯಾಯಮೂರ್ತಿ ವಿನೋದ್ ಚಂದ್ರನ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪೀಠವು ಮಧ್ಯಂತರ ಜಾಮೀನು ನೀಡಿದೆ. </p>.<p>ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಪಾಟೀಲ ಅವರು ಸುಪ್ರೀಂ ಕೋರ್ಟ್ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿಯನ್ನು ನ್ಯಾಯಪೀಠ ಈ ಹಿಂದೆ ವಜಾಗೊಳಿಸಿತ್ತು. ಆ ಬಳಿಕ, ವೈದ್ಯಕೀಯ ಕಾರಣ ನೀಡಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವರದಿ ನೀಡುವಂತೆ ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸೂಚಿಸಿತ್ತು. ಆರೋಪಿಗೆ ಶಸ್ತ್ರಚಿಕಿತ್ಸೆಯ ಅಗತ್ಯ ಇಲ್ಲ ಎಂದು ಸಂಸ್ಥೆ ವರದಿ ನೀಡಿತ್ತು. ಬಳಿಕ ಪೀಠವು ಜಾಮೀನು ಅರ್ಜಿ ವಜಾಗೊಳಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಿಎಸ್ಐ ಹಗರಣ ಹಾಗೂ ಕೆಇಎ ನೇಮಕಾತಿ ಪರೀಕ್ಷೆ ಬರೆಯಲು ಹಣ ಪಡೆದು ಬ್ಲೂಟೂತ್ ನೀಡಿದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಅವರಿಗೆ 21 ದಿನಗಳ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ನೀಡಿದೆ. </p>.<p>ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಇರುವ ಕಾರಣ ಮಧ್ಯಂತರ ಜಾಮೀನು ನೀಡಬೇಕೆಂದು ಪಾಟೀಲ ಅವರು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಹಾಗೂ ನ್ಯಾಯಮೂರ್ತಿ ವಿನೋದ್ ಚಂದ್ರನ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪೀಠವು ಮಧ್ಯಂತರ ಜಾಮೀನು ನೀಡಿದೆ. </p>.<p>ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಪಾಟೀಲ ಅವರು ಸುಪ್ರೀಂ ಕೋರ್ಟ್ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿಯನ್ನು ನ್ಯಾಯಪೀಠ ಈ ಹಿಂದೆ ವಜಾಗೊಳಿಸಿತ್ತು. ಆ ಬಳಿಕ, ವೈದ್ಯಕೀಯ ಕಾರಣ ನೀಡಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವರದಿ ನೀಡುವಂತೆ ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸೂಚಿಸಿತ್ತು. ಆರೋಪಿಗೆ ಶಸ್ತ್ರಚಿಕಿತ್ಸೆಯ ಅಗತ್ಯ ಇಲ್ಲ ಎಂದು ಸಂಸ್ಥೆ ವರದಿ ನೀಡಿತ್ತು. ಬಳಿಕ ಪೀಠವು ಜಾಮೀನು ಅರ್ಜಿ ವಜಾಗೊಳಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>