ಶಹಾಬಾದ್ ನಗರಸಭೆಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿದ್ದ ಜ್ಯೋತಿ ಪಾಟೀಲ ಅಭ್ಯರ್ಥಿ ಶಾಂತಿಬಾಯಿಗೆ ಪರೀಕ್ಷೆಯಲ್ಲಿ ಪಾಸು ಮಾಡಿಸುವ ನಿಟ್ಟಿನಲ್ಲಿ ಪ್ರಕರಣದ ಕಿಂಗ್ಪಿನ್ ಮಂಜುನಾಥ ಮೇಳಕುಂದಿ ಯನ್ನು ಭೇಟಿ ಮಾಡಿಸಿದ್ದರು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಪರಾರಿಯಾಗಿದ್ದ ಜ್ಯೋತಿ ಪಾಟೀಲ ಅವರನ್ನು ಮಾರ್ಚ್ 31ರಂದು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.