<p><strong>ಕಲಬುರಗಿ</strong>: ಪಿಎಸ್ಐ ಅಕ್ರಮ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದ ದಾಖಲೆ ಹಾಗೂ ಮಾಹಿತಿ ಪಡೆಯಲು ಸಿಐಡಿ ಅಧಿಕಾರಿಗಳು ಮೂರನೇ ನೋಟಿಸ್ ನೀಡಿದ್ದರಿಂದ ಚಿತ್ತಾಪುರದ ಕಾಂಗ್ರೆಸ್ ಶಾಸಕ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಇದೇ 5ರಿಂದ 7ರವರೆಗೆ ಹಮ್ಮಿಕೊಂಡಿದ್ದ ಜಿಲ್ಲೆಯ ಭೇಟಿಯನ್ನು ರದ್ದುಗೊಳಿಸಿದ್ದಾರೆ.</p>.<p>ಮೇ 4ರಂದು ಪ್ರಿಯಾಂಕ್ ಅವರಿಗೆ ನೋಟಿಸ್ ನೀಡಿದ್ದ ಸಿಐಡಿ ಡಿವೈಎಸ್ಪಿ ನರಸಿಂಹಮೂರ್ತಿ ಪಿ, ‘ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದ ಆಡಿಯೊ ಬಗ್ಗೆ 25ರಂದು ಸಿಐಡಿ ಕಚೇರಿಗೆ ಹಾಜರಾಗಿ ವಿವರ ನೀಡುವಂತೆ ಕೇಳಲಾಗಿತ್ತು. ಆದರೆ, 28ರಂದು ತಾವು ಉತ್ತರವನ್ನು ಸಲ್ಲಿಸಿದ್ದು, ಅಲ್ಲಿ ಪ್ರಕರಣಕ್ಕೆ ಸಂಬಂಧವಿಲ್ಲದ ಸಂಗತಿಗಳು ಕಂಡು ಬಂದಿವೆ’ ಎಂದಿದ್ದರು.</p>.<p>ಎರಡು ದಿನಗಳ ಒಳಗಾಗಿ ಸಿಐಡಿ ಕಚೇರಿಗೆ ಹಾಜರಾಗಿ ಮಾಹಿತಿ ನೀಡುವಂತೆ ನೋಟಿಸ್ನಲ್ಲಿ ತಿಳಿಸಿದ್ದಾರೆ. ಹೀಗಾಗಿ, ಸಿಐಡಿ ಕಚೇರಿಗೆ ತೆರಳಬೇಕಿರುವುದರಿಂದ ಶಾಸಕರು ಕಲಬುರಗಿ ಹಾಗೂ ಚಿತ್ತಾಪುರ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ಪ್ರಿಯಾಂಕ್ ಅವರ ಆಪ್ತ ಸಹಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಪಿಎಸ್ಐ ಅಕ್ರಮ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದ ದಾಖಲೆ ಹಾಗೂ ಮಾಹಿತಿ ಪಡೆಯಲು ಸಿಐಡಿ ಅಧಿಕಾರಿಗಳು ಮೂರನೇ ನೋಟಿಸ್ ನೀಡಿದ್ದರಿಂದ ಚಿತ್ತಾಪುರದ ಕಾಂಗ್ರೆಸ್ ಶಾಸಕ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಇದೇ 5ರಿಂದ 7ರವರೆಗೆ ಹಮ್ಮಿಕೊಂಡಿದ್ದ ಜಿಲ್ಲೆಯ ಭೇಟಿಯನ್ನು ರದ್ದುಗೊಳಿಸಿದ್ದಾರೆ.</p>.<p>ಮೇ 4ರಂದು ಪ್ರಿಯಾಂಕ್ ಅವರಿಗೆ ನೋಟಿಸ್ ನೀಡಿದ್ದ ಸಿಐಡಿ ಡಿವೈಎಸ್ಪಿ ನರಸಿಂಹಮೂರ್ತಿ ಪಿ, ‘ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದ ಆಡಿಯೊ ಬಗ್ಗೆ 25ರಂದು ಸಿಐಡಿ ಕಚೇರಿಗೆ ಹಾಜರಾಗಿ ವಿವರ ನೀಡುವಂತೆ ಕೇಳಲಾಗಿತ್ತು. ಆದರೆ, 28ರಂದು ತಾವು ಉತ್ತರವನ್ನು ಸಲ್ಲಿಸಿದ್ದು, ಅಲ್ಲಿ ಪ್ರಕರಣಕ್ಕೆ ಸಂಬಂಧವಿಲ್ಲದ ಸಂಗತಿಗಳು ಕಂಡು ಬಂದಿವೆ’ ಎಂದಿದ್ದರು.</p>.<p>ಎರಡು ದಿನಗಳ ಒಳಗಾಗಿ ಸಿಐಡಿ ಕಚೇರಿಗೆ ಹಾಜರಾಗಿ ಮಾಹಿತಿ ನೀಡುವಂತೆ ನೋಟಿಸ್ನಲ್ಲಿ ತಿಳಿಸಿದ್ದಾರೆ. ಹೀಗಾಗಿ, ಸಿಐಡಿ ಕಚೇರಿಗೆ ತೆರಳಬೇಕಿರುವುದರಿಂದ ಶಾಸಕರು ಕಲಬುರಗಿ ಹಾಗೂ ಚಿತ್ತಾಪುರ ಪ್ರವಾಸವನ್ನು ರದ್ದುಗೊಳಿಸಿದ್ದಾರೆ ಎಂದು ಪ್ರಿಯಾಂಕ್ ಅವರ ಆಪ್ತ ಸಹಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>