<p><strong>ಕಲಬುರಗಿ</strong>: ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ರುದ್ರಗೌಡ ಅಲಿಯಾಸ್ ಆರ್.ಡಿ.ಪಾಟೀಲನನ್ನು ಕೊನೆಗೂ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ಜನವರಿ 28ರಂದು ಸ್ಥಳಾಂತರಿಸಲಾಗಿದೆ.</p>.<p>ಕಾರಾಗೃಹದ ಆಡಳಿತ, ಭದ್ರತೆಯ ಹಿತದೃಷ್ಟಿಯಿಂದ ಮತ್ತು ಜೈಲಿನ ಅಧಿಕಾರಿ–ಸಿಬ್ಬಂದಿಯ ಮನೋಸ್ಥೈರ್ಯ ಹೆಚ್ಚಿಸುವ ದೃಷ್ಟಿಯಿಂದ ಆರ್.ಡಿ.ಪಾಟೀಲ ಸ್ಥಳಾಂತರಿಸಲಾಗುತ್ತಿದೆ ಎಂದು ಕಲಬುರಗಿ ಕೇಂದ್ರ ಕಾರಾಗೃಹವು ಆದೇಶದಲ್ಲಿ ಹೇಳಿದೆ.</p>.<p>ರಾಜ್ಯದ ವಿವಿಧೆಡೆ 20ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿರುವ ಆರ್.ಡಿ.ಪಾಟೀಲ 2023 ನವೆಂಬರ್ 11ರಿಂದ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾ ಕೈದಿಯಾಗಿದ್ದ. ಕಳೆದ ಎರಡ್ಮೂರು ತಿಂಗಳಲ್ಲಿ ಜೈಲು ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡಿದ್ದ. ಬಳಿಕ ಆತನ ಸ್ಥಳಾಂತರಕ್ಕೆ ಜೈಲಿನ ಅಧಿಕಾರಿಗಳು ಪತ್ರ ಬರೆದಿದ್ದರು.</p>.<p>ಈ ಬೆನ್ನಲ್ಲೆ ಆರ್.ಡಿ.ಪಾಟೀಲ ಜೈಲಿನ ಅಧಿಕಾರಿಗಳ ವಿರುದ್ಧ ಲಂಚದ ಆರೋಪ ಮಾಡಿದ್ದ. ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅದಾದ ಕೆಲವೇ ದಿನಗಳಲ್ಲಿ ಜೈಲಿನಲ್ಲಿ ಕೈದಿಗಳು ಮದ್ಯ ಕುಡಿಯುತ್ತ, ಇಸ್ಪೀಟ್ ಆಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡಿತ್ತು. ಜೈಲಿನಲ್ಲಿ ಕೈದಿಗಳಿಗೆ ‘ರಾಜಾತಿಥ್ಯ’ ನೀಡುತ್ತಿರುವ ಶಂಕೆ ವ್ಯಕ್ತವಾಗಿತ್ತು.</p>.<p>ಈ ಕುರಿತು ವಿಸ್ತೃತ ತನಿಖೆ ನಡೆಸುವಂತೆ ಕಾರಾಗೃಹಗಳ ಇಲಾಖೆಯ ಡಿಜಿಪಿ ಅಲೋಕಕುಮಾರ್ ಆದೇಶಿಸಿದ್ದರು. ಅದರಂತೆ ತನಿಖೆ ಪ್ರಗತಿಯಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ರುದ್ರಗೌಡ ಅಲಿಯಾಸ್ ಆರ್.ಡಿ.ಪಾಟೀಲನನ್ನು ಕೊನೆಗೂ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ಜನವರಿ 28ರಂದು ಸ್ಥಳಾಂತರಿಸಲಾಗಿದೆ.</p>.<p>ಕಾರಾಗೃಹದ ಆಡಳಿತ, ಭದ್ರತೆಯ ಹಿತದೃಷ್ಟಿಯಿಂದ ಮತ್ತು ಜೈಲಿನ ಅಧಿಕಾರಿ–ಸಿಬ್ಬಂದಿಯ ಮನೋಸ್ಥೈರ್ಯ ಹೆಚ್ಚಿಸುವ ದೃಷ್ಟಿಯಿಂದ ಆರ್.ಡಿ.ಪಾಟೀಲ ಸ್ಥಳಾಂತರಿಸಲಾಗುತ್ತಿದೆ ಎಂದು ಕಲಬುರಗಿ ಕೇಂದ್ರ ಕಾರಾಗೃಹವು ಆದೇಶದಲ್ಲಿ ಹೇಳಿದೆ.</p>.<p>ರಾಜ್ಯದ ವಿವಿಧೆಡೆ 20ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿರುವ ಆರ್.ಡಿ.ಪಾಟೀಲ 2023 ನವೆಂಬರ್ 11ರಿಂದ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾ ಕೈದಿಯಾಗಿದ್ದ. ಕಳೆದ ಎರಡ್ಮೂರು ತಿಂಗಳಲ್ಲಿ ಜೈಲು ಅಧಿಕಾರಿಗಳೊಂದಿಗೆ ಕಿರಿಕ್ ಮಾಡಿಕೊಂಡಿದ್ದ. ಬಳಿಕ ಆತನ ಸ್ಥಳಾಂತರಕ್ಕೆ ಜೈಲಿನ ಅಧಿಕಾರಿಗಳು ಪತ್ರ ಬರೆದಿದ್ದರು.</p>.<p>ಈ ಬೆನ್ನಲ್ಲೆ ಆರ್.ಡಿ.ಪಾಟೀಲ ಜೈಲಿನ ಅಧಿಕಾರಿಗಳ ವಿರುದ್ಧ ಲಂಚದ ಆರೋಪ ಮಾಡಿದ್ದ. ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅದಾದ ಕೆಲವೇ ದಿನಗಳಲ್ಲಿ ಜೈಲಿನಲ್ಲಿ ಕೈದಿಗಳು ಮದ್ಯ ಕುಡಿಯುತ್ತ, ಇಸ್ಪೀಟ್ ಆಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡಿತ್ತು. ಜೈಲಿನಲ್ಲಿ ಕೈದಿಗಳಿಗೆ ‘ರಾಜಾತಿಥ್ಯ’ ನೀಡುತ್ತಿರುವ ಶಂಕೆ ವ್ಯಕ್ತವಾಗಿತ್ತು.</p>.<p>ಈ ಕುರಿತು ವಿಸ್ತೃತ ತನಿಖೆ ನಡೆಸುವಂತೆ ಕಾರಾಗೃಹಗಳ ಇಲಾಖೆಯ ಡಿಜಿಪಿ ಅಲೋಕಕುಮಾರ್ ಆದೇಶಿಸಿದ್ದರು. ಅದರಂತೆ ತನಿಖೆ ಪ್ರಗತಿಯಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>