ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರನಾಳ: ಪಿಎಸ್‌ಐ ಹುದ್ದೆಗೆ ಪೂಜಾರಾಣಿ ಆಯ್ಕೆ

Last Updated 23 ಜನವರಿ 2022, 14:57 IST
ಅಕ್ಷರ ಗಾತ್ರ

ಕಮಲಾಪುರ: ತಾಲ್ಲೂಕಿನ ವರನಾಳ ಗ್ರಾಮದ ಯುವತಿ ಪೂಜಾರಾಣಿ ಬಸವರಾಜ ಚೀಲಿ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದಾರೆ.

ಶಹಾಪುರ ತಾಲ್ಲೂಕಿನ ಮಲ್ಲಾ (ಕೆ) ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಬಸವಕಲ್ಯಾಣ ತಾಲ್ಲೂಕಿನ ಕಲಖೋರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಕಮಲಾಪುರ ಸರ್ಕಾರಿ ಕನ್ಯಾ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣ ಮುಗಿಸಿದ್ದಾರೆ. ನಂತರ ಕಲಬುರಗಿಯ ಸತ್ಯಂ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಹಾಗೂ ಕಲಬುರಗಿಯ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್‌ ಆಂಡ್‌ ಕಮ್ಯುನಿಕೇಶನ್‌ನಲ್ಲಿ ಪದವಿ ಪಡೆದಿದ್ದಾರೆ. ಕಳೆದ ಬಾರಿ ಹೊರಡಿಸಿದ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ಮೀಸಲಾತಿಯಲ್ಲಿ 9ನೇ ರ್‍ಯಾಂಕ್‌ ಪಡೆದಿದ್ದಾರೆ.

ತಂದೆ ಬಸವರಾಜ ಶಿಕ್ಷಕರಾಗಿದ್ದು ನಿವೃತ್ತರಾಗಿದ್ದಾರೆ. ತಂದೆ–ತಾಯಿಯ ಸಹಕಾರ, ಪ್ರೋತ್ಸಾಹ, ಶಿಕ್ಷಕರ ಮಾರ್ಗದರ್ಶನ ನನ್ನ ಯಶಸ್ಸಿಗೆ ಕಾರಣ ಎಂದು ಪೂಜಾರಾಣಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT