ಕಲಬುರ್ಗಿ: ಜಗಳ ಬಿಡಿಸಲು ಹೋದ ಪೊಲೀಸ್ ಅಧಿಕಾರಿಯನ್ನು ನಿಂದಿಸಿ ಹಲ್ಲೆ ಮಾಡಿದ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ, ಇಲ್ಲಿನ 4ನೇ ಜೆಎಂಎಫ್ಸಿ ನ್ಯಾಯಾಲಯವು ಮೇತ್ತಾರಗಲ್ಲಿಯ ವಿಕಾಸ ರಾಜು ಟಾಕ ಹಾಗೂ ಸುನೀಲ ಭಗವಾನದಾಸ್ ಸೌದಾಗರ ಎಂಬುವರಿಗೆ 6 ತಿಂಗಳು ಸಾದಾ ಜೈಲು ಶಿಕ್ಷೆ ಹಾಗೂ ₹ 4 ಸಾವಿರ ದಂಡ ವಿಧಿಸಿದೆ.