<p><strong>ಕಲಬುರ್ಗಿ:</strong> ಹಿಂದುಳಿದ ವರ್ಗಗಳ ಇಲಾಖೆಯಿಂದ ಸಾಲ ಕೊಡಿಸುವುದಾಗಿ ದಿನಪತ್ರಿಕೆ ವರದಿಗಾರ ಸಿದ್ದಪ್ಪ ಶರಣಪ್ಪ ಅವರನ್ನು ನಂಬಿಸಿ ಅವರಿಂದ ಅರ್ಜಿ ಪಡೆದು, ನಕಲಿ ಬ್ಯಾಂಕ್ ಖಾತೆ ಮೂಲಕ ₹ 17,800 ಲಪಟಾಯಿಸಿದ್ದ ಆರೋಪಿಗಳಿಗೆ ಇಲ್ಲಿ ಒಂದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ ₹ 20 ಸಾವಿರ ದಂಡ ವಿಧಿಸಿದೆ.</p>.<p>ಮೃತ ಆರೋಪಿ ಲೋಕೇಶ, ಬಿ. ಅಮರನಾಥ, ಚಂದ್ರಕಾಂತ, ಮಲ್ಲಿಕಾರ್ಜುನ ಹಾಗೂ ಶಶಿಕಾಂತ ಎಂಬುವವರೇ ವಂಚನೆ ಮಾಡಿದ ಆರೋಪಿಗಳು. ಸಿದ್ದಪ್ಪ ಅವರ ಖಾತೆಗೆ ₹ 2400 ಜಮಾ ಮಾಡಿ, ಉಳಿದ ಹಣವನ್ನು ನಕಲಿ ಖಾತೆ ಮೂಲಕ ಪಡೆದು ಸ್ವಂತಕ್ಕೆ ಬಳಕೆ ಮಾಡಿಕೊಂಡಿದ್ದರು. ಈ ಬಗ್ಗೆ ಸ್ಟೇಶನ್ ಬಜಾರ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ವಾದ ವಿವಾದ ಆಲಿಸಿದ ನ್ಯಾಯಾಧೀಶ ಸುಕಲಾಕ್ಷ ಪಾಲನ್ ಅವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎಸ್.ಆರ್.ನರಸಿಂಹಲು ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಹಿಂದುಳಿದ ವರ್ಗಗಳ ಇಲಾಖೆಯಿಂದ ಸಾಲ ಕೊಡಿಸುವುದಾಗಿ ದಿನಪತ್ರಿಕೆ ವರದಿಗಾರ ಸಿದ್ದಪ್ಪ ಶರಣಪ್ಪ ಅವರನ್ನು ನಂಬಿಸಿ ಅವರಿಂದ ಅರ್ಜಿ ಪಡೆದು, ನಕಲಿ ಬ್ಯಾಂಕ್ ಖಾತೆ ಮೂಲಕ ₹ 17,800 ಲಪಟಾಯಿಸಿದ್ದ ಆರೋಪಿಗಳಿಗೆ ಇಲ್ಲಿ ಒಂದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ ₹ 20 ಸಾವಿರ ದಂಡ ವಿಧಿಸಿದೆ.</p>.<p>ಮೃತ ಆರೋಪಿ ಲೋಕೇಶ, ಬಿ. ಅಮರನಾಥ, ಚಂದ್ರಕಾಂತ, ಮಲ್ಲಿಕಾರ್ಜುನ ಹಾಗೂ ಶಶಿಕಾಂತ ಎಂಬುವವರೇ ವಂಚನೆ ಮಾಡಿದ ಆರೋಪಿಗಳು. ಸಿದ್ದಪ್ಪ ಅವರ ಖಾತೆಗೆ ₹ 2400 ಜಮಾ ಮಾಡಿ, ಉಳಿದ ಹಣವನ್ನು ನಕಲಿ ಖಾತೆ ಮೂಲಕ ಪಡೆದು ಸ್ವಂತಕ್ಕೆ ಬಳಕೆ ಮಾಡಿಕೊಂಡಿದ್ದರು. ಈ ಬಗ್ಗೆ ಸ್ಟೇಶನ್ ಬಜಾರ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ವಾದ ವಿವಾದ ಆಲಿಸಿದ ನ್ಯಾಯಾಧೀಶ ಸುಕಲಾಕ್ಷ ಪಾಲನ್ ಅವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎಸ್.ಆರ್.ನರಸಿಂಹಲು ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>