ಮೃತ ಆರೋಪಿ ಲೋಕೇಶ, ಬಿ. ಅಮರನಾಥ, ಚಂದ್ರಕಾಂತ, ಮಲ್ಲಿಕಾರ್ಜುನ ಹಾಗೂ ಶಶಿಕಾಂತ ಎಂಬುವವರೇ ವಂಚನೆ ಮಾಡಿದ ಆರೋಪಿಗಳು. ಸಿದ್ದಪ್ಪ ಅವರ ಖಾತೆಗೆ ₹ 2400 ಜಮಾ ಮಾಡಿ, ಉಳಿದ ಹಣವನ್ನು ನಕಲಿ ಖಾತೆ ಮೂಲಕ ಪಡೆದು ಸ್ವಂತಕ್ಕೆ ಬಳಕೆ ಮಾಡಿಕೊಂಡಿದ್ದರು. ಈ ಬಗ್ಗೆ ಸ್ಟೇಶನ್ ಬಜಾರ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.