<p><strong>ಕಲಬುರ್ಗಿ:</strong> ಕೆಲಸ ಕೊಡಿಸುವುದಾಗಿ ನಂಬಿಸಿ ₹ 15 ಸಾವಿರ ಲಂಚ ಪಡೆದ ಇಲ್ಲಿನ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾಗಿದ್ದ ರಮೇಶಕುಮಾರ ಮುನಿನಾಗಪ್ಪ ಅವರಿಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಏಳು ವರ್ಷ ಜೈಲು ಹಾಗೂ ₹ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.</p>.<p>ಈ ಪ್ರಕರಣ 2014ರಲ್ಲಿ ನಡೆದಿತ್ತು. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಹೇಮನೂರು ಗ್ರಾಮದ ಚಂದ್ರಶೇಖರ ರಂಗಣ್ಣ ನಾಯಕ ಅವರು, ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ಕಲಬುರ್ಗಿ ಪ್ರವಾಸೋದ್ಯಮ ಇಲಾಖೆಯಲ್ಲಿ ಅರ್ಜಿ ಹಾಕಿದ್ದರು. ಆಗ ಇಲಾಖೆಯ ಉಪನಿರ್ದೇಶಕರಾಗಿದ್ದ ರಮೇಶಕುಮಾರ ಅವರು ₹ 20 ಸಾವಿರ ಲಂಚ ಕೇಳಿದ್ದರು. ಈ ಬಗ್ಗೆ ಚಂದ್ರಶೇಖರ ಅವರು ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ತಮ್ಮಾರಾಯ ಪಾಟೀಲ ಅವರ ಬಳಿ ದೂರು ಸಲ್ಲಿಸಿದ್ದರು.</p>.<p>ಮಾತಿನಂತೆ ಕಲಬುರ್ಗಿಯ ಹೋಟೆಲ್ ಒಂದರಲ್ಲಿ ₹ 15 ಸಾವಿರ ಲಂಚ ಪಡೆಯುತ್ತಿದ್ದ ವೇಳೆಯೇ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದರು. ಪ್ರಕರಣದ ತನಿಖೆ ಪೂರ್ಣಗೊಳಿಸಿದ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಎಚ್.ದೊಡ್ಡಣ್ಣ ಅವರು 5.10.2015ರಂದು ಆರೋಪಿತರ ವಿರುದ್ದ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಹಾಗೂ ವಿಶೇಷ ಸೆಷನ್ಸ್ ನ್ಯಾಯಾಧೀಶರಾದ ಆರ್.ಜೆ. ಸತೀಶ ಸಿಂಗ್ ಅವರು ಅಪರಾಧಿಗೆ ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದರು.</p>.<p>ಲೋಕಾಯುಕ್ತದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಎ.ಎಸ್.ಚಾಂದಕವಟೆ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಕೆಲಸ ಕೊಡಿಸುವುದಾಗಿ ನಂಬಿಸಿ ₹ 15 ಸಾವಿರ ಲಂಚ ಪಡೆದ ಇಲ್ಲಿನ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾಗಿದ್ದ ರಮೇಶಕುಮಾರ ಮುನಿನಾಗಪ್ಪ ಅವರಿಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಏಳು ವರ್ಷ ಜೈಲು ಹಾಗೂ ₹ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.</p>.<p>ಈ ಪ್ರಕರಣ 2014ರಲ್ಲಿ ನಡೆದಿತ್ತು. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಹೇಮನೂರು ಗ್ರಾಮದ ಚಂದ್ರಶೇಖರ ರಂಗಣ್ಣ ನಾಯಕ ಅವರು, ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ಕಲಬುರ್ಗಿ ಪ್ರವಾಸೋದ್ಯಮ ಇಲಾಖೆಯಲ್ಲಿ ಅರ್ಜಿ ಹಾಕಿದ್ದರು. ಆಗ ಇಲಾಖೆಯ ಉಪನಿರ್ದೇಶಕರಾಗಿದ್ದ ರಮೇಶಕುಮಾರ ಅವರು ₹ 20 ಸಾವಿರ ಲಂಚ ಕೇಳಿದ್ದರು. ಈ ಬಗ್ಗೆ ಚಂದ್ರಶೇಖರ ಅವರು ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ತಮ್ಮಾರಾಯ ಪಾಟೀಲ ಅವರ ಬಳಿ ದೂರು ಸಲ್ಲಿಸಿದ್ದರು.</p>.<p>ಮಾತಿನಂತೆ ಕಲಬುರ್ಗಿಯ ಹೋಟೆಲ್ ಒಂದರಲ್ಲಿ ₹ 15 ಸಾವಿರ ಲಂಚ ಪಡೆಯುತ್ತಿದ್ದ ವೇಳೆಯೇ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದರು. ಪ್ರಕರಣದ ತನಿಖೆ ಪೂರ್ಣಗೊಳಿಸಿದ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಎಚ್.ದೊಡ್ಡಣ್ಣ ಅವರು 5.10.2015ರಂದು ಆರೋಪಿತರ ವಿರುದ್ದ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಹಾಗೂ ವಿಶೇಷ ಸೆಷನ್ಸ್ ನ್ಯಾಯಾಧೀಶರಾದ ಆರ್.ಜೆ. ಸತೀಶ ಸಿಂಗ್ ಅವರು ಅಪರಾಧಿಗೆ ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದರು.</p>.<p>ಲೋಕಾಯುಕ್ತದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಎ.ಎಸ್.ಚಾಂದಕವಟೆ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>