ಈ ಪ್ರಕರಣ 2014ರಲ್ಲಿ ನಡೆದಿತ್ತು. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಹೇಮನೂರು ಗ್ರಾಮದ ಚಂದ್ರಶೇಖರ ರಂಗಣ್ಣ ನಾಯಕ ಅವರು, ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ಕಲಬುರ್ಗಿ ಪ್ರವಾಸೋದ್ಯಮ ಇಲಾಖೆಯಲ್ಲಿ ಅರ್ಜಿ ಹಾಕಿದ್ದರು. ಆಗ ಇಲಾಖೆಯ ಉಪನಿರ್ದೇಶಕರಾಗಿದ್ದ ರಮೇಶಕುಮಾರ ಅವರು ₹ 20 ಸಾವಿರ ಲಂಚ ಕೇಳಿದ್ದರು. ಈ ಬಗ್ಗೆ ಚಂದ್ರಶೇಖರ ಅವರು ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ತಮ್ಮಾರಾಯ ಪಾಟೀಲ ಅವರ ಬಳಿ ದೂರು ಸಲ್ಲಿಸಿದ್ದರು.