ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಚೋಟೇಶ್ವರ ಜಾತ್ರೆ ರದ್ದು

Last Updated 9 ನವೆಂಬರ್ 2020, 5:29 IST
ಅಕ್ಷರ ಗಾತ್ರ

ಆಳಂದ: ತಾಲ್ಲೂಕಿನ ರಾಚಣ್ಣಾ ವಾಗ್ದರ್ಗಿ ಗ್ರಾಮದಲ್ಲಿ ನ.17ರಂದು ನಡೆಯಬೇಕಿದ್ದ ರಾಚೋಟೇಶ್ವರ ಜಾತ್ರೆಯನ್ನು ಕೊರೊನಾ ಕಾರಣ ರದ್ದುಗೊಳಿಸಲಾಗಿದೆ.

ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್ ಅವರ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಜಾತ್ರಾ ಸಮಿತಿ ಸದಸ್ಯರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಭಕ್ತರು ದೇವಸ್ಥಾನಕ್ಕೆ ಬರದೆ ತಮ್ಮ ಮನೆಯಲ್ಲಿಯೇ ಪೂಜೆ ಸಲ್ಲಿಸಬೇಕು ಎಂದು ರಾಚೋಟೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಸಿದ್ದರಾಮ ಕಂದಗೋಳೆ ಮನವಿ ಮಾಡಿದ್ದಾರೆ.

ಬೆಣ್ಣೆತೊರಾ ನದಿ ದಡದಲ್ಲಿರುವ ರಾಚೋಟೇಶ್ವರ ದೇವಸ್ಥಾನದ ಜಾತ್ರೆ ದೀಪಾವಳಿ ಹಬ್ಬದ ಮರುದಿನ ನಡೆಯುತ್ತದೆ. ಕಲಬುರ್ಗಿ ಸೇರಿದಂತೆ ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳಿಂದಲೂ ಜಾತ್ರೆಗೆ ಸಾವಿರಾರು ಭಕ್ತರು ಬರುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT