‘ಲೋಕಸಭೆ ಚುನಾವಣೆಗೆ ಇನ್ನೂ ಸಮಯವಿದೆ. ಮಹಾಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರಾಗುತ್ತಾರೆ ಎಂಬುದು ಚುನಾವಣೆ ವೇಳೆ ನಿರ್ಧಾರವಾಗುತ್ತದೆ. ಮಹಾಮೈತ್ರಿಕೂಟದ ಎಲ್ಲಾ ಪಕ್ಷಗಳ ಮುಖಂಡರು ಈ ಬಗ್ಗೆ ಚರ್ಚಿಸಿ, ಪ್ರಧಾನಿ ಅಭ್ಯರ್ಥಿ ಯಾರು ಎಂಬುದನ್ನು ನಿರ್ಧರಿಸುತ್ತಾರೆ. ಕಾಂಗ್ರೆಸ್ ನಾಯಕನಾದ ನನ್ನನ್ನು ಕೇಳಿದರೆ ರಾಹುಲ್ ಗಾಂಧಿ ಎಂದೇ ಹೇಳುತ್ತೇನೆ. ಕಾನೂನು ಮತ್ತು ಸಂವಿಧಾನವಕ್ಕೆ ಗೌರವ ಕೊಡದ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿಯಾಗಿದೆ’ ಎಂದು ತಿಳಿಸಿದರು.