‘ನಗರದ ಬಹುಪಾಲು ಕಡೆ ಮಳೆಯಿಂದ ಜನಜೀವನ ತತ್ತರಿಸಿದೆ. ರಸ್ತೆ ಮೇಲಿನ ನೀರು, ಚರಂಡಿ ನೀರು ಮನೆಗಳಿಗೆ ನುಗ್ಗಿದೆ. ಅದ್ರರಲ್ಲೂ, ದಕ್ಷಿಣ ಮತಕ್ಷೇತ್ರದ ದತ್ತನಗರದಲ್ಲಿ ಚರಂಡಿ ಸಂಪೂರ್ಣ ಹಾಳಾಗಿದೆ. ಮನೆಗಳಿಗೆ ಪೂರೈಸುವ ಕುಡಿಯುವ ನೀರಿನಲ್ಲಿ ಚರಂಡಿ ನೀರೇ ಬರುತ್ತಿದೆ. ಈಗಾಗಲೇ ಕೊರೊನಾ ಸಂಕಷ್ಟ ಎದುರಿಸುತ್ತಿರುವ ಜನಕ್ಕೆ ಈಗ ಮತ್ತಷ್ಟು ರೋಗಗಳ ಭೀತಿ ಎದುರಾಗಿದೆ’ ಎಂದು ಅವರು, ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.