<p><strong>ಕಲಬುರಗಿ:</strong> ಜಿಲ್ಲೆಯ ಕಾಳಗಿ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾಳಾಗಿ ರೈತರು ಕಂಗಲಾಗಿದ್ದಾರೆ. ಈ ರೈತರಿಗೆ ಪರಿಹಾರ ಘೋಷಣೆ ಸೇರಿದಂತೆ ವಿವಿಧಬೇಡಿಕೆಗಳಿಗೆ ಸರ್ಕಾರ ಕೂಡಲೇ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದಿಂದ ಶುಕ್ರವಾರ ಮಹಾಗಾಂವ ಕ್ರಾಸ್-ಕೋಡ್ಲಿ ನಡುವಿನ ರಟಕಲ್ ಗ್ರಾಮದಲ್ಲಿ ಎತ್ತಿನ ಬಂಡಿ, ಟ್ರ್ಯಾಕ್ಟರ್ ದೊಂದಿಗೆ ಮಳೆಯಲ್ಲೇ ಕೊಡೆ ಹಿಡಿದು ರಾಜ್ಯಹೆದ್ದಾರಿ 32ನ್ನು ತಡೆದು ಪ್ರತಿಭಟನೆ ಮಾಡಲಾಯಿತು.</p><p>ಕರ್ನಾಟಕ ರಾಜ್ಯ ಪ್ರಾಂತರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ಸರ್ಕಾರ ಕೂಡಲೇ ಬೆಳೆವಿಮೆ ಬಾಕಿ ಮಂಜೂರು ಮಾಡಬೇಕು. ಹಸಿಬರಗಾಲ ಘೋಷಣೆ, ರಟಕಲ್ ಗ್ರಾಮದಲ್ಲಿ ಅವೈಜ್ಞಾನಿಕ ಚರಂಡಿ ಸರಿಪಡಿಸಬೇಕು, ರಾಜ್ಯಹೆದ್ದಾರಿ ತಗ್ಗು ಗುಂಡಿ ಬಿದ್ದುದನ್ನು ದುರಸ್ತಿ ಮಾಡಿ ಎಂದು ಆಗ್ರಹಿಸಿದರು.</p><p>ಸ್ಥಳಕ್ಕೆ ಕಾಳಗಿ ತಾಲ್ಲೂಕು ಪಂಚಾಯಿತಿ ಇಒ ಬಸಲಿಂಗಪ್ಪ ಡಿಗ್ಗಿ, ಕೋಡ್ಲಿ ಉಪತಹಸೀಲ್ದಾರ್ ರವೀಂದ್ರ ಭೇಟಿ ನೀಡಿ ಮನವಿ ಸ್ವೀಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಜಿಲ್ಲೆಯ ಕಾಳಗಿ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾಳಾಗಿ ರೈತರು ಕಂಗಲಾಗಿದ್ದಾರೆ. ಈ ರೈತರಿಗೆ ಪರಿಹಾರ ಘೋಷಣೆ ಸೇರಿದಂತೆ ವಿವಿಧಬೇಡಿಕೆಗಳಿಗೆ ಸರ್ಕಾರ ಕೂಡಲೇ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದಿಂದ ಶುಕ್ರವಾರ ಮಹಾಗಾಂವ ಕ್ರಾಸ್-ಕೋಡ್ಲಿ ನಡುವಿನ ರಟಕಲ್ ಗ್ರಾಮದಲ್ಲಿ ಎತ್ತಿನ ಬಂಡಿ, ಟ್ರ್ಯಾಕ್ಟರ್ ದೊಂದಿಗೆ ಮಳೆಯಲ್ಲೇ ಕೊಡೆ ಹಿಡಿದು ರಾಜ್ಯಹೆದ್ದಾರಿ 32ನ್ನು ತಡೆದು ಪ್ರತಿಭಟನೆ ಮಾಡಲಾಯಿತು.</p><p>ಕರ್ನಾಟಕ ರಾಜ್ಯ ಪ್ರಾಂತರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ಸರ್ಕಾರ ಕೂಡಲೇ ಬೆಳೆವಿಮೆ ಬಾಕಿ ಮಂಜೂರು ಮಾಡಬೇಕು. ಹಸಿಬರಗಾಲ ಘೋಷಣೆ, ರಟಕಲ್ ಗ್ರಾಮದಲ್ಲಿ ಅವೈಜ್ಞಾನಿಕ ಚರಂಡಿ ಸರಿಪಡಿಸಬೇಕು, ರಾಜ್ಯಹೆದ್ದಾರಿ ತಗ್ಗು ಗುಂಡಿ ಬಿದ್ದುದನ್ನು ದುರಸ್ತಿ ಮಾಡಿ ಎಂದು ಆಗ್ರಹಿಸಿದರು.</p><p>ಸ್ಥಳಕ್ಕೆ ಕಾಳಗಿ ತಾಲ್ಲೂಕು ಪಂಚಾಯಿತಿ ಇಒ ಬಸಲಿಂಗಪ್ಪ ಡಿಗ್ಗಿ, ಕೋಡ್ಲಿ ಉಪತಹಸೀಲ್ದಾರ್ ರವೀಂದ್ರ ಭೇಟಿ ನೀಡಿ ಮನವಿ ಸ್ವೀಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>