ಕಲಬುರ್ಗಿ: ನಗರದಲ್ಲಿ ಬುಧವಾರ ಮಧ್ಯಾಹ್ನ ಸುಮಾರು ಒಂದು ತಾಸು ಬಿರುಸಿನ ಮಳೆ ಸುರಿಯಿತು. ಇದರಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ನೀರು ಹರಿಯಿತು.
ಬೆಳಿಗ್ಗೆ ತಂಪನೆಯ ವಾತಾವರಣ ಇತ್ತು. ತುಂತುರು ಮಳೆ ನಿರೀಕ್ಷೆಯಲ್ಲಿದ್ದ ಜನರಿಗೆ ಏಕಾಏಕಿ ಬಿರುಸಿನ ಮಳೆ ಶುರುವಾಗಿದ್ದರಿಂದ ರಸ್ತೆಯಲ್ಲಿ ನೆನೆದುಕೊಂಡೇ ಮನೆ, ಕಚೇರಿ ಸೇರಿದರು.
ಬಸವೇಶ್ವರ ಆಸ್ಪತ್ರೆಯಲ್ಲಿ ಕೋವಿಡ್–19 ಪ್ರಯೋಗಾಲಯ ಉದ್ಘಾಟನಾ ಸಮಾರಂಭಕ್ಕೆಂದು ಅಳವಡಿಸಲಾದ ಶಾಮಿಯಾನದಲ್ಲಿ ಮಳೆ ನೀರು ತುಂಬಿಕೊಂಡಿತು. ಆದರೆ, ಅಷ್ಟರಲ್ಲಾಗಲೇ ಕಾರ್ಯಕ್ರಮ ಮುಕ್ತಾಯವಾಗಿತ್ತು. ಸತತ ಎರಡು ದಿನಗಳಿಂದ ಮಳೆ ಸುರಿಯುತ್ತಿರುವುದರಿಂದ ನಗರ ತಂಪಾಗಿದೆ.