ಮಧ್ಯರಾತ್ರಿ ಸುರಿದ ಧಾರಾಕಾರ ಮಳೆಯಿಂದ ನಗರದ ಚರಂಡಿಗಳು ತುಂಬಿ, ರಸ್ತೆ ಹಾಗೂ ಅಕ್ಕಪಕ್ಕದ ಮನೆಗಳಲ್ಲಿ ನೀರು ನುಗ್ಗಿದೆ. ಹನುಮಾನ ನಗರದ ಬಾಲಕರ ವಸತಿ ನಿಲಯದ ಆವರಣಕ್ಕೆ ನುಗ್ಗಿದ ಚರಂಡಿಯ ನೀರು ಮತ್ತು ತ್ಯಾಜ್ಯವಸ್ತು ಸೇರಿಕೊಂಡು ಗಬ್ಬೆದ್ದು ನಾರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದಲ್ಲಿ ಎಲ್ಲೆಂದರಲ್ಲಿ ಚರಂಡಿಗಳು ತುಂಬಿ ರಸ್ತೆಯ ಮೇಲೆ ನೀರು ಹರಿದುಬಂದ ಪರಿಣಾಮ ಮೂಗು ಮುಚ್ಚಿಕೊಂಡು ಓಡಾಡುವಂತಾಯಿತು. ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದೆ. ಅದರ ಬಗ್ಗೆ ನಗರಸಭೆ ಮುಂಜಾಗ್ರತೆ ಕ್ರಮ ವಹಿಸಬೇಕಾಗಿರುವುದು ಅವಶ್ಯ ಎಂದು ಜನರು ಹೇಳಿದರು.