<p><strong>ಕಲಬುರಗಿ</strong>: ಬಿಸಿಲಿನಿಂದ ತತ್ತರಿಸಿದ್ದ ಕಲ್ಯಾಣ ಕರ್ನಾಟಕದ ವಿವಿಧೆಡೆ ಶುಕ್ರವಾರ ಸುರಿದ ಮಳೆ ತುಸು ತಂಪೆರೆದಿದೆ. </p>.<p>ಕೊಪ್ಪಳ ತಾಲ್ಲೂಕಿನ ಜಬ್ಬಲಗುಡ್ಡ ಗ್ರಾಮದಲ್ಲಿ ಗುರುವಾರ ರಾತ್ರಿ ಸಿಡಿಲು ಬಡಿದು ಕುರಿಗಾಹಿ ಕರಿಯಪ್ಪ ದ್ಯಾಮಣ್ಣ ಮ್ಯಾದ್ನೇರಿ (35) ಮೃತಪಟ್ಟಿದ್ದಾರೆ. ಗಂಗಾವತಿ ತಾಲ್ಲೂಕಿನಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಯಾಗಿದೆ. ಸಿದ್ದಿಕೇರಿ ಗ್ರಾಮದ ಜಮೀನಿನಲ್ಲಿ ಕಟ್ಟಿದ್ದ 6 ಆಕಳುಗಳು ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿವೆ.</p>.<p>ಕಲಬುರಗಿಯಲ್ಲಿ ಶುಕ್ರವಾರ ದಿನವಿಡೀ ಪ್ರಖರ ಬಿಸಿಲಿತ್ತು. ಸಂಜೆ ಹೊತ್ತಿಗೆ ಆಗಸದಲ್ಲಿ ಮೋಡಗಳು ದಟ್ಟೈಸಿತು. ಬಳಿಕ ಮಿಂಚು–ಬಿರುಗಾಳಿ ಸಹಿತ ಕಲಬುರಗಿ ನಗರ, ಚಿಂಚೋಳಿ, ಕಾಳಗಿ ಸೇರಿದಂತೆ ಹಲವೆಡೆ ಮಳೆಯಾಗಿದೆ.</p>.<p>ಚಿಂಚೋಳಿ ತಾಲ್ಲೂಕಿನ ಭೂಂಯಾರ (ಕೆ) ಗ್ರಾಮದಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಕಾಳಗಿಯಲ್ಲಿ ಬಿರುಗಾಳಿಗೆ ರಟಕಲ್ ವಿರಕ್ತಮಠದ ಕಾರ್ಯಕ್ರಮಕ್ಕಾಗಿ ಹಾಕಿದ್ದ ಪೆಂಡಾಲ್ ಮಗುಚಿದೆ. ಕಲಬುರಗಿಯಲ್ಲಿ ಬಸವ ಜಯಂತಿ ಕಾರ್ಯಕ್ರಮಕ್ಕಾಗಿ ಹಾಕಿದ್ದ ವಿದ್ಯುದ್ದೀಪಗಳ ಕಂಬವೊಂದು ನೆಲಕ್ಕೆ ವಾಲಿದ್ದರಿಂದ ಕೆಲಕಾಲ ವಾಹನಗಳ ಸಂಚಾರಕ್ಕೆ ತೊಡಕಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ಬಿಸಿಲಿನಿಂದ ತತ್ತರಿಸಿದ್ದ ಕಲ್ಯಾಣ ಕರ್ನಾಟಕದ ವಿವಿಧೆಡೆ ಶುಕ್ರವಾರ ಸುರಿದ ಮಳೆ ತುಸು ತಂಪೆರೆದಿದೆ. </p>.<p>ಕೊಪ್ಪಳ ತಾಲ್ಲೂಕಿನ ಜಬ್ಬಲಗುಡ್ಡ ಗ್ರಾಮದಲ್ಲಿ ಗುರುವಾರ ರಾತ್ರಿ ಸಿಡಿಲು ಬಡಿದು ಕುರಿಗಾಹಿ ಕರಿಯಪ್ಪ ದ್ಯಾಮಣ್ಣ ಮ್ಯಾದ್ನೇರಿ (35) ಮೃತಪಟ್ಟಿದ್ದಾರೆ. ಗಂಗಾವತಿ ತಾಲ್ಲೂಕಿನಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಯಾಗಿದೆ. ಸಿದ್ದಿಕೇರಿ ಗ್ರಾಮದ ಜಮೀನಿನಲ್ಲಿ ಕಟ್ಟಿದ್ದ 6 ಆಕಳುಗಳು ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿವೆ.</p>.<p>ಕಲಬುರಗಿಯಲ್ಲಿ ಶುಕ್ರವಾರ ದಿನವಿಡೀ ಪ್ರಖರ ಬಿಸಿಲಿತ್ತು. ಸಂಜೆ ಹೊತ್ತಿಗೆ ಆಗಸದಲ್ಲಿ ಮೋಡಗಳು ದಟ್ಟೈಸಿತು. ಬಳಿಕ ಮಿಂಚು–ಬಿರುಗಾಳಿ ಸಹಿತ ಕಲಬುರಗಿ ನಗರ, ಚಿಂಚೋಳಿ, ಕಾಳಗಿ ಸೇರಿದಂತೆ ಹಲವೆಡೆ ಮಳೆಯಾಗಿದೆ.</p>.<p>ಚಿಂಚೋಳಿ ತಾಲ್ಲೂಕಿನ ಭೂಂಯಾರ (ಕೆ) ಗ್ರಾಮದಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಕಾಳಗಿಯಲ್ಲಿ ಬಿರುಗಾಳಿಗೆ ರಟಕಲ್ ವಿರಕ್ತಮಠದ ಕಾರ್ಯಕ್ರಮಕ್ಕಾಗಿ ಹಾಕಿದ್ದ ಪೆಂಡಾಲ್ ಮಗುಚಿದೆ. ಕಲಬುರಗಿಯಲ್ಲಿ ಬಸವ ಜಯಂತಿ ಕಾರ್ಯಕ್ರಮಕ್ಕಾಗಿ ಹಾಕಿದ್ದ ವಿದ್ಯುದ್ದೀಪಗಳ ಕಂಬವೊಂದು ನೆಲಕ್ಕೆ ವಾಲಿದ್ದರಿಂದ ಕೆಲಕಾಲ ವಾಹನಗಳ ಸಂಚಾರಕ್ಕೆ ತೊಡಕಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>