<p><strong>ಕಲಬುರಗಿ:</strong> ನಗರದಲ್ಲಿ ಭಾನುವಾರ ರಾತ್ರಿ ಬೀಸಿದ ಬಿರುಗಾಳಿ ಹಾಗೂ ಸುರಿದ ಮಳೆಗೆ ನಗರದಲ್ಲು ಹಲವು ಕಡೆ ಮರಗಳು ಉರುಳಿಬಿದ್ದಿದ್ದು ಪ್ರಯಾಣಿಕರು ಸಂಕಟ ಅನುಭವಿಸಿದರು.</p>.<p>ನಗರದ ರೋಟರಿ ಶಾಲೆಯಿಂದ ಆನಂದ ಹೋಟೆಲ್ಗೆ ಹೋಗುವ ಮಾರ್ಗದಲ್ಲಿದ್ದ ಮರ ಗಾಳಿಗೆ ಉರುಳಿ ಬಿದ್ದಿದ್ದರಿಂದ ಗಂಟೆಗಟ್ಟಲೇ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಮಧ್ಯಾಹ್ನದ ಬಳಿಕ ಮಹಾನಗರ ಪಾಲಿಕೆ ಸಿಬ್ಬಂದಿ ಆ ಮರವನ್ನು ತೆರವುಗೊಳಿಸಿದರು. </p>.<p>ನಗರದ ಹಳೇ ಜೇವರ್ಗಿ ರಸ್ತೆಯ ವೆಂಕಟಗಿರಿ ಹೋಟೆಲ್ ಬಳಿಯೂ ಮರವೊಂದು ರಾತ್ರಿ ಉರುಳಿ ಬಿದ್ದಿತ್ತು. ಅದನ್ನು ಪಾಲಿಕೆ ಸಿಬ್ಬಂದಿ ಹಾಗೂ ಸಂಚಾರ ಪೊಲೀಸರು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<p>ನಗರದ ಕೋರ್ಟ್ ಸರ್ಕಲ್ನಿಂದ ಜೆಸ್ಕಾಂ ಪ್ರಧಾನ ಕಚೇರಿಗೆ ಹೋಗುವ ರಸ್ತೆಯಲ್ಲಿ ನೀರು ನಿಂತು ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿತ್ತು. ಪ್ರತಿ ಬಾರಿ ಮಳೆ ಬಂದಾಗಲೂ ಇಲ್ಲಿ ನೀರು ನಿಲ್ಲುವುದು ಸಾಮಾನ್ಯವಾಗಿದ್ದು, ವಾಹನ ಸವಾರರಿಗೆ ಕಿರಿಕಿರಿಯಾಗುತ್ತಿದೆ. </p>.<p>ಜಿಲ್ಲೆಯ ಕಾಳಗಿ ತಾಲ್ಲೂಕಿನ ಪಸ್ತಾಪುರದಲ್ಲಿ ಸೋಮವಾರ ಭಾರಿ ಮಳೆ ಸುರಿದಿದ್ದು, ಗ್ರಾಮದ ಅಂಗಡಿ, ಮನೆಗಳಿಗೆ ನುಗ್ಗಿದೆ. ಭಾರಿ ಮಳೆಯಿಂದಾಗಿ ನೀರು ಹೊಳೆಯಂತೆ ರಸ್ತೆಗಳಲ್ಲಿ ಹರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನಗರದಲ್ಲಿ ಭಾನುವಾರ ರಾತ್ರಿ ಬೀಸಿದ ಬಿರುಗಾಳಿ ಹಾಗೂ ಸುರಿದ ಮಳೆಗೆ ನಗರದಲ್ಲು ಹಲವು ಕಡೆ ಮರಗಳು ಉರುಳಿಬಿದ್ದಿದ್ದು ಪ್ರಯಾಣಿಕರು ಸಂಕಟ ಅನುಭವಿಸಿದರು.</p>.<p>ನಗರದ ರೋಟರಿ ಶಾಲೆಯಿಂದ ಆನಂದ ಹೋಟೆಲ್ಗೆ ಹೋಗುವ ಮಾರ್ಗದಲ್ಲಿದ್ದ ಮರ ಗಾಳಿಗೆ ಉರುಳಿ ಬಿದ್ದಿದ್ದರಿಂದ ಗಂಟೆಗಟ್ಟಲೇ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಮಧ್ಯಾಹ್ನದ ಬಳಿಕ ಮಹಾನಗರ ಪಾಲಿಕೆ ಸಿಬ್ಬಂದಿ ಆ ಮರವನ್ನು ತೆರವುಗೊಳಿಸಿದರು. </p>.<p>ನಗರದ ಹಳೇ ಜೇವರ್ಗಿ ರಸ್ತೆಯ ವೆಂಕಟಗಿರಿ ಹೋಟೆಲ್ ಬಳಿಯೂ ಮರವೊಂದು ರಾತ್ರಿ ಉರುಳಿ ಬಿದ್ದಿತ್ತು. ಅದನ್ನು ಪಾಲಿಕೆ ಸಿಬ್ಬಂದಿ ಹಾಗೂ ಸಂಚಾರ ಪೊಲೀಸರು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<p>ನಗರದ ಕೋರ್ಟ್ ಸರ್ಕಲ್ನಿಂದ ಜೆಸ್ಕಾಂ ಪ್ರಧಾನ ಕಚೇರಿಗೆ ಹೋಗುವ ರಸ್ತೆಯಲ್ಲಿ ನೀರು ನಿಂತು ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿತ್ತು. ಪ್ರತಿ ಬಾರಿ ಮಳೆ ಬಂದಾಗಲೂ ಇಲ್ಲಿ ನೀರು ನಿಲ್ಲುವುದು ಸಾಮಾನ್ಯವಾಗಿದ್ದು, ವಾಹನ ಸವಾರರಿಗೆ ಕಿರಿಕಿರಿಯಾಗುತ್ತಿದೆ. </p>.<p>ಜಿಲ್ಲೆಯ ಕಾಳಗಿ ತಾಲ್ಲೂಕಿನ ಪಸ್ತಾಪುರದಲ್ಲಿ ಸೋಮವಾರ ಭಾರಿ ಮಳೆ ಸುರಿದಿದ್ದು, ಗ್ರಾಮದ ಅಂಗಡಿ, ಮನೆಗಳಿಗೆ ನುಗ್ಗಿದೆ. ಭಾರಿ ಮಳೆಯಿಂದಾಗಿ ನೀರು ಹೊಳೆಯಂತೆ ರಸ್ತೆಗಳಲ್ಲಿ ಹರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>