<p><strong>ಕಾಳಗಿ:</strong> ತಾಲ್ಲೂಕಿನ ರಾಜಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶರೆಡ್ಡಿ ಮಲ್ಲಾರೆಡ್ಡಿ ಎಂಬುವರ ಸದಸ್ಯತ್ವ ರದ್ದುಪಡಿಸಿ ಮತ್ತು ಮುಂದಿನ ಆರು ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪೀಠಾಧಿಕಾರಿ (ಗ್ರಾ.ಪಂ) ಶಿವಕುಮಾರ ಅವರು ಡಿ.22ರಂದು ಆದೇಶ ಹೊರಡಿಸಿದ್ದಾರೆ.</p>.<p>ಮಳಗಾ (ಕೆ) ಗ್ರಾಮದ ಫಿರ್ಯಾದುದಾರೆ ಚಾಂದಸುಲ್ತಾನಾ ಖರೀದಿಸಿದ ಜಾಗವನ್ನು ಗ್ರಾಮ ಪಂಚಾಯಿತಿ ಡಿಸಿಬಿಯಲ್ಲಿ ನಮೂದಿಸುವ ಕೆಲಸ ಮಾಡಿಸಿಕೊಡುವ ಆರೋಪದ ಮೇಲೆ ಅಧ್ಯಕ್ಷ ಪ್ರಕಾಶರೆಡ್ಡಿ ₹5 ಸಾವಿರ ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೋಲಿಸ್ರಿಂದ ಟ್ರ್ಯಾಪ್ ಆಗಿದ್ದು ಸಾಬೀತಾಗಿದೆ.</p>.<p>ಪ್ರಯುಕ್ತ ಗ್ರಾ.ಪಂ ಅಧ್ಯಕ್ಷ ಪ್ರಕಾಶರೆಡ್ಡಿ ಅವರನ್ನು ಕರ್ನಾಟಕ ಗ್ರಾಮ್ ಸ್ವರಾಜ್ ಮತ್ತು ಗ್ರಾಮ ಪಂಚಾಯತ್ ರಾಜ್ ಅಧಿನಿಯಮ-1993ರ ಪ್ರಕರಣ-43(ಎ) ಮತ್ತು 48(4)ರನ್ವಯ ಗ್ರಾಮ ಪಂಚಾಯಿತಿ ಸದಸ್ಯತ್ವದಿಂದ ತೆಗೆದುಹಾಕಿ ಮತ್ತು ಪ್ರಕರಣ 43(ಎ)(2)ರ ಅನ್ವಯ ಮುಂದಿನ ಆರು ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ಆದೇಶಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಳಗಿ:</strong> ತಾಲ್ಲೂಕಿನ ರಾಜಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶರೆಡ್ಡಿ ಮಲ್ಲಾರೆಡ್ಡಿ ಎಂಬುವರ ಸದಸ್ಯತ್ವ ರದ್ದುಪಡಿಸಿ ಮತ್ತು ಮುಂದಿನ ಆರು ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪೀಠಾಧಿಕಾರಿ (ಗ್ರಾ.ಪಂ) ಶಿವಕುಮಾರ ಅವರು ಡಿ.22ರಂದು ಆದೇಶ ಹೊರಡಿಸಿದ್ದಾರೆ.</p>.<p>ಮಳಗಾ (ಕೆ) ಗ್ರಾಮದ ಫಿರ್ಯಾದುದಾರೆ ಚಾಂದಸುಲ್ತಾನಾ ಖರೀದಿಸಿದ ಜಾಗವನ್ನು ಗ್ರಾಮ ಪಂಚಾಯಿತಿ ಡಿಸಿಬಿಯಲ್ಲಿ ನಮೂದಿಸುವ ಕೆಲಸ ಮಾಡಿಸಿಕೊಡುವ ಆರೋಪದ ಮೇಲೆ ಅಧ್ಯಕ್ಷ ಪ್ರಕಾಶರೆಡ್ಡಿ ₹5 ಸಾವಿರ ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೋಲಿಸ್ರಿಂದ ಟ್ರ್ಯಾಪ್ ಆಗಿದ್ದು ಸಾಬೀತಾಗಿದೆ.</p>.<p>ಪ್ರಯುಕ್ತ ಗ್ರಾ.ಪಂ ಅಧ್ಯಕ್ಷ ಪ್ರಕಾಶರೆಡ್ಡಿ ಅವರನ್ನು ಕರ್ನಾಟಕ ಗ್ರಾಮ್ ಸ್ವರಾಜ್ ಮತ್ತು ಗ್ರಾಮ ಪಂಚಾಯತ್ ರಾಜ್ ಅಧಿನಿಯಮ-1993ರ ಪ್ರಕರಣ-43(ಎ) ಮತ್ತು 48(4)ರನ್ವಯ ಗ್ರಾಮ ಪಂಚಾಯಿತಿ ಸದಸ್ಯತ್ವದಿಂದ ತೆಗೆದುಹಾಕಿ ಮತ್ತು ಪ್ರಕರಣ 43(ಎ)(2)ರ ಅನ್ವಯ ಮುಂದಿನ ಆರು ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ಆದೇಶಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>