<p><strong>ಕಾಳಗಿ:</strong> ತಾಲ್ಲೂಕಿನ ರಾಜಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶರೆಡ್ಡಿ ಮಲ್ಲಾರೆಡ್ಡಿ ಎಂಬುವರ ಸದಸ್ಯತ್ವ ರದ್ದುಪಡಿಸಿ ಮತ್ತು ಮುಂದಿನ ಆರು ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪೀಠಾಧಿಕಾರಿ (ಗ್ರಾ.ಪಂ) ಶಿವಕುಮಾರ ಅವರು ಡಿ.22ರಂದು ಆದೇಶ ಹೊರಡಿಸಿದ್ದಾರೆ.</p>.<p>ಮಳಗಾ (ಕೆ) ಗ್ರಾಮದ ಫಿರ್ಯಾದುದಾರೆ ಚಾಂದಸುಲ್ತಾನಾ ಖರೀದಿಸಿದ ಜಾಗವನ್ನು ಗ್ರಾಮ ಪಂಚಾಯಿತಿ ಡಿಸಿಬಿಯಲ್ಲಿ ನಮೂದಿಸುವ ಕೆಲಸ ಮಾಡಿಸಿಕೊಡುವ ಆರೋಪದ ಮೇಲೆ ಅಧ್ಯಕ್ಷ ಪ್ರಕಾಶರೆಡ್ಡಿ ₹5 ಸಾವಿರ ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೋಲಿಸ್ರಿಂದ ಟ್ರ್ಯಾಪ್ ಆಗಿದ್ದು ಸಾಬೀತಾಗಿದೆ.</p>.<p>ಪ್ರಯುಕ್ತ ಗ್ರಾ.ಪಂ ಅಧ್ಯಕ್ಷ ಪ್ರಕಾಶರೆಡ್ಡಿ ಅವರನ್ನು ಕರ್ನಾಟಕ ಗ್ರಾಮ್ ಸ್ವರಾಜ್ ಮತ್ತು ಗ್ರಾಮ ಪಂಚಾಯತ್ ರಾಜ್ ಅಧಿನಿಯಮ-1993ರ ಪ್ರಕರಣ-43(ಎ) ಮತ್ತು 48(4)ರನ್ವಯ ಗ್ರಾಮ ಪಂಚಾಯಿತಿ ಸದಸ್ಯತ್ವದಿಂದ ತೆಗೆದುಹಾಕಿ ಮತ್ತು ಪ್ರಕರಣ 43(ಎ)(2)ರ ಅನ್ವಯ ಮುಂದಿನ ಆರು ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ಆದೇಶಿಸಲಾಗಿದೆ.</p>
<p><strong>ಕಾಳಗಿ:</strong> ತಾಲ್ಲೂಕಿನ ರಾಜಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶರೆಡ್ಡಿ ಮಲ್ಲಾರೆಡ್ಡಿ ಎಂಬುವರ ಸದಸ್ಯತ್ವ ರದ್ದುಪಡಿಸಿ ಮತ್ತು ಮುಂದಿನ ಆರು ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪೀಠಾಧಿಕಾರಿ (ಗ್ರಾ.ಪಂ) ಶಿವಕುಮಾರ ಅವರು ಡಿ.22ರಂದು ಆದೇಶ ಹೊರಡಿಸಿದ್ದಾರೆ.</p>.<p>ಮಳಗಾ (ಕೆ) ಗ್ರಾಮದ ಫಿರ್ಯಾದುದಾರೆ ಚಾಂದಸುಲ್ತಾನಾ ಖರೀದಿಸಿದ ಜಾಗವನ್ನು ಗ್ರಾಮ ಪಂಚಾಯಿತಿ ಡಿಸಿಬಿಯಲ್ಲಿ ನಮೂದಿಸುವ ಕೆಲಸ ಮಾಡಿಸಿಕೊಡುವ ಆರೋಪದ ಮೇಲೆ ಅಧ್ಯಕ್ಷ ಪ್ರಕಾಶರೆಡ್ಡಿ ₹5 ಸಾವಿರ ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೋಲಿಸ್ರಿಂದ ಟ್ರ್ಯಾಪ್ ಆಗಿದ್ದು ಸಾಬೀತಾಗಿದೆ.</p>.<p>ಪ್ರಯುಕ್ತ ಗ್ರಾ.ಪಂ ಅಧ್ಯಕ್ಷ ಪ್ರಕಾಶರೆಡ್ಡಿ ಅವರನ್ನು ಕರ್ನಾಟಕ ಗ್ರಾಮ್ ಸ್ವರಾಜ್ ಮತ್ತು ಗ್ರಾಮ ಪಂಚಾಯತ್ ರಾಜ್ ಅಧಿನಿಯಮ-1993ರ ಪ್ರಕರಣ-43(ಎ) ಮತ್ತು 48(4)ರನ್ವಯ ಗ್ರಾಮ ಪಂಚಾಯಿತಿ ಸದಸ್ಯತ್ವದಿಂದ ತೆಗೆದುಹಾಕಿ ಮತ್ತು ಪ್ರಕರಣ 43(ಎ)(2)ರ ಅನ್ವಯ ಮುಂದಿನ ಆರು ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ಆದೇಶಿಸಲಾಗಿದೆ.</p>