<p><strong>ಸೇಡಂ:</strong> ಕರ್ನಾಟಕ ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನಲ್ಲಿ ಪ್ರಕಟವಾದ ಪುಸ್ತಕಗಳಲ್ಲಿ ಮಕ್ಕಳ ಸಾಹಿತ್ಯ ಪ್ರಕಾರದಲ್ಲಿ ಕವಿ ರಾಜಶೇಖರ ಕುಕ್ಕುಂದಾ ಅವರ ‘ಬಿಸಿ ಬಿಸಿ ಬಾತು’ ಕೃತಿ ಆಯ್ಕೆಯಾಗಿದೆ.</p>.<p>ರಾಜಶೇಖರ ಅವರು ಪ್ರಸ್ತುತ ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಪ್ರಶಸ್ತಿಪತ್ರ ಒಳಗೊಂಡಿವೆ.</p>.<p>ಬಾಲ್ಯದಿಂದಲೇ ಸಾಹಿತ್ಯ ರಚನೆ ಆರಂಭಿಸಿದ ರಾಜಶೇಖರ ಅಲ್ಲೂರಕರ್ ಅವರು ಮೂಲತಃ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಕುಕ್ಕುಂದಾ ಗ್ರಾಮದವರು. ‘ರಾಜಶೇಖರ ಕುಕ್ಕುಂದಾ’ ಎಂಬ ಕಾವ್ಯನಾಮದಿಂದಲೇ ಎಲ್ಲರಿಗೂ ಚಿರಪರಿಚಿತರು. ಶಿಶುಕಾವ್ಯದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಅವರು ಬರೆದ ಗೋಲ ಗುಮ್ಮಟ (7ನೇ ತರಗತಿ), ಕಲಿತ ಪಾಠ (3ನೇ ತರಗತಿ) ಪಠ್ಯಕ್ಕೆ ಆಯ್ಕೆಯಾಗಿವೆ.</p>.<p>ತರಗತಿಯಲ್ಲಿರುವಾಗಲೇ ಮಕ್ಕಳ ಕಾವ್ಯ ರಚನೆಗೆ ತೊಡಗಿದ ಅವರು ಚೆಲುವ ಚಂದಿರ, ಗೋಲ ಗುಮ್ಮಟ, ಪುಟಾಣಿ ಪ್ರಾಸಗಳು, ಸೋನ ಪಾಪಡಿ ಸೇರಿದಂತೆ ಇತ್ಯಾದಿ ಕೃತಿಗಳ ಮೂಲಕ ಮಕ್ಕಳ ಪ್ರಪಂಚವನ್ನು ಸೃಷ್ಟಿಸಿದವರು. ಅವರ ಕವಿತೆಗಳು ಕನ್ನಡ ದಿನ ಪತ್ರಿಕೆಗಳಲ್ಲಿ, ನಿಯತಕಾಲಿಕೆಗಳಲ್ಲಿ, ಕರ್ನಾಟಕ ಹಾಗೂ ಮಹಾರಾಷ್ಟ್ರದ ಪಠ್ಯಪುಸ್ತಕಗಳಲ್ಲಿ ಪ್ರಕಟಗೊಂಡಿವೆ. ಆಕಾಶವಾಣಿಯಲ್ಲಿ ಮಕ್ಕಳ ಧಾರಾವಾಹಿ ಮತ್ತು ಕವಿತೆಗಳು ಪ್ರಸಾರಗೊಂಡಿವೆ.</p>.<p>ಅವರು ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳಲ್ಲಿ ಕಾವ್ಯವಾಚನ ಮತ್ತು ಪ್ರಬಂಧ ಮಂಡಿಸಿದ್ದಾರೆ. ಪ್ರಜಾವಾಣಿ ದೀಪಾವಳಿ ಶಿಶುಕಾವ್ಯ ಸ್ಪರ್ಧೆಯಲ್ಲಿ ಅನೇಕ ಬಾರಿ ಬಹುಮಾನಗಳು ಲಭಿಸಿವೆ. ಶಿವಮೊಗ್ಗ ಕರ್ನಾಟಕ ಸಂಘದ 2012ನೇ ಸಾಲಿನ ನಾ. ಡಿಸೋಜಾ ಪುರಸ್ಕಾರ, ಸೇಡಂನ ನಾಗಪ್ಪ ಮುನ್ನೂರು ಪ್ರತಿಷ್ಠಾನದ 2013ನೇ ಸಾಲಿನ ‘ಅಮ್ಮ’ ಪುರಸ್ಕಾರ ಹಾಗೂ 2024ನೇ ಸಾಲಿನ ‘ಜಿ.ಬಿ. ಹೊಂಬಳ ಮಕ್ಕಳ ಸಾಹಿತ್ಯ ರಾಜ್ಯ ಪ್ರಶಸ್ತಿ’ ಸೇರಿದಂತೆ ಹಲವು ಗೌರವಗಳು ಸಂದಿವೆ.</p>.<div><blockquote>ಮಕ್ಕಳ ಸಾಹಿತ್ಯ ಬರಹವನ್ನು ಗುರುತಿಸಿ ಕರ್ನಾಟಕ ಸಾಹಿತ್ಯ ಅಕಾಡೆಮಿ ನನ್ನ ಕೃತಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಖುಷಿ ತಂದಿದ್ದು ಈ ಪ್ರಶಸ್ತಿಯೂ ಎಲ್ಲಾ ಮಕ್ಕಳಿಗೆ ಸಲ್ಲುತ್ತದೆ.</blockquote><span class="attribution">ರಾಜಶೇಖರ ಕುಕ್ಕುಂದಾ ಮಕ್ಕಳ ಕವಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ:</strong> ಕರ್ನಾಟಕ ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನಲ್ಲಿ ಪ್ರಕಟವಾದ ಪುಸ್ತಕಗಳಲ್ಲಿ ಮಕ್ಕಳ ಸಾಹಿತ್ಯ ಪ್ರಕಾರದಲ್ಲಿ ಕವಿ ರಾಜಶೇಖರ ಕುಕ್ಕುಂದಾ ಅವರ ‘ಬಿಸಿ ಬಿಸಿ ಬಾತು’ ಕೃತಿ ಆಯ್ಕೆಯಾಗಿದೆ.</p>.<p>ರಾಜಶೇಖರ ಅವರು ಪ್ರಸ್ತುತ ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಪ್ರಶಸ್ತಿಪತ್ರ ಒಳಗೊಂಡಿವೆ.</p>.<p>ಬಾಲ್ಯದಿಂದಲೇ ಸಾಹಿತ್ಯ ರಚನೆ ಆರಂಭಿಸಿದ ರಾಜಶೇಖರ ಅಲ್ಲೂರಕರ್ ಅವರು ಮೂಲತಃ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಕುಕ್ಕುಂದಾ ಗ್ರಾಮದವರು. ‘ರಾಜಶೇಖರ ಕುಕ್ಕುಂದಾ’ ಎಂಬ ಕಾವ್ಯನಾಮದಿಂದಲೇ ಎಲ್ಲರಿಗೂ ಚಿರಪರಿಚಿತರು. ಶಿಶುಕಾವ್ಯದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಅವರು ಬರೆದ ಗೋಲ ಗುಮ್ಮಟ (7ನೇ ತರಗತಿ), ಕಲಿತ ಪಾಠ (3ನೇ ತರಗತಿ) ಪಠ್ಯಕ್ಕೆ ಆಯ್ಕೆಯಾಗಿವೆ.</p>.<p>ತರಗತಿಯಲ್ಲಿರುವಾಗಲೇ ಮಕ್ಕಳ ಕಾವ್ಯ ರಚನೆಗೆ ತೊಡಗಿದ ಅವರು ಚೆಲುವ ಚಂದಿರ, ಗೋಲ ಗುಮ್ಮಟ, ಪುಟಾಣಿ ಪ್ರಾಸಗಳು, ಸೋನ ಪಾಪಡಿ ಸೇರಿದಂತೆ ಇತ್ಯಾದಿ ಕೃತಿಗಳ ಮೂಲಕ ಮಕ್ಕಳ ಪ್ರಪಂಚವನ್ನು ಸೃಷ್ಟಿಸಿದವರು. ಅವರ ಕವಿತೆಗಳು ಕನ್ನಡ ದಿನ ಪತ್ರಿಕೆಗಳಲ್ಲಿ, ನಿಯತಕಾಲಿಕೆಗಳಲ್ಲಿ, ಕರ್ನಾಟಕ ಹಾಗೂ ಮಹಾರಾಷ್ಟ್ರದ ಪಠ್ಯಪುಸ್ತಕಗಳಲ್ಲಿ ಪ್ರಕಟಗೊಂಡಿವೆ. ಆಕಾಶವಾಣಿಯಲ್ಲಿ ಮಕ್ಕಳ ಧಾರಾವಾಹಿ ಮತ್ತು ಕವಿತೆಗಳು ಪ್ರಸಾರಗೊಂಡಿವೆ.</p>.<p>ಅವರು ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳಲ್ಲಿ ಕಾವ್ಯವಾಚನ ಮತ್ತು ಪ್ರಬಂಧ ಮಂಡಿಸಿದ್ದಾರೆ. ಪ್ರಜಾವಾಣಿ ದೀಪಾವಳಿ ಶಿಶುಕಾವ್ಯ ಸ್ಪರ್ಧೆಯಲ್ಲಿ ಅನೇಕ ಬಾರಿ ಬಹುಮಾನಗಳು ಲಭಿಸಿವೆ. ಶಿವಮೊಗ್ಗ ಕರ್ನಾಟಕ ಸಂಘದ 2012ನೇ ಸಾಲಿನ ನಾ. ಡಿಸೋಜಾ ಪುರಸ್ಕಾರ, ಸೇಡಂನ ನಾಗಪ್ಪ ಮುನ್ನೂರು ಪ್ರತಿಷ್ಠಾನದ 2013ನೇ ಸಾಲಿನ ‘ಅಮ್ಮ’ ಪುರಸ್ಕಾರ ಹಾಗೂ 2024ನೇ ಸಾಲಿನ ‘ಜಿ.ಬಿ. ಹೊಂಬಳ ಮಕ್ಕಳ ಸಾಹಿತ್ಯ ರಾಜ್ಯ ಪ್ರಶಸ್ತಿ’ ಸೇರಿದಂತೆ ಹಲವು ಗೌರವಗಳು ಸಂದಿವೆ.</p>.<div><blockquote>ಮಕ್ಕಳ ಸಾಹಿತ್ಯ ಬರಹವನ್ನು ಗುರುತಿಸಿ ಕರ್ನಾಟಕ ಸಾಹಿತ್ಯ ಅಕಾಡೆಮಿ ನನ್ನ ಕೃತಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಖುಷಿ ತಂದಿದ್ದು ಈ ಪ್ರಶಸ್ತಿಯೂ ಎಲ್ಲಾ ಮಕ್ಕಳಿಗೆ ಸಲ್ಲುತ್ತದೆ.</blockquote><span class="attribution">ರಾಜಶೇಖರ ಕುಕ್ಕುಂದಾ ಮಕ್ಕಳ ಕವಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>