<p><strong>ಕಲಬುರ್ಗಿ: </strong>ಹೈದರಾಬಾದ್ ಕರ್ನಾಟಕ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಈ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಶಾಸಕರ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ, ಸಚಿವ ರಾಜಶೇಖರ ಬಿ.ಪಾಟೀಲ ಹುಮನಾಬಾದ್ ಹೇಳಿದರು.</p>.<p>ಮಂಡಳಿಯ ಅಧ್ಯಕ್ಷರಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ನಂತರ ಅವರು ಮಾತನಾಡಿದರು.</p>.<p>‘2018-19ನೇ ಸಾಲಿನ ಕ್ರಿಯಾ ಯೋಜನೆ ರೂಪಿಸಲು ಎಲ್ಲ ಜಿಲ್ಲೆಗಳಿಗೆ ತಿಳಿಸಲಾಗಿದೆ. ಬೀದರ್, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳ ಕ್ರಿಯಾ ಯೋಜನೆಗಳ ಸಲ್ಲಿಕೆ ಬಾಕಿದೆ. ಆದಷ್ಟು ಬೇಗ ಕ್ರಿಯಾ ಯೋಜನೆಗಳನ್ನು ಪಡೆದು ಅನುಮೋದನೆ ನೀಡಲಾಗುವುದು’ ಎಂದರು.</p>.<p>‘ಎಚ್ಕೆಆರ್ಡಿಬಿಯ ವ್ಯವಸ್ಥೆ ಬದಲಾಯಿಸಬೇಕಿದ್ದು, ಮುಖ್ಯಮಂತ್ರಿ ಅವರೊಂದಿಗೆ ಈ ನಿಟ್ಟಿನಲ್ಲಿ ಚರ್ಚಿಸಲಾಗಿದೆ. ಮಂಡಳಿಯ ಕಾರ್ಯದರ್ಶಿ ಅವರೊಂದಿಗೆ ಸಮಗ್ರವಾಗಿ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದರು.</p>.<p>‘ಎಚ್ಕೆಆರ್ಡಿಬಿ ರಚನೆಯಾದ ನಂತರ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ನಂಜುಂಡಪ್ಪ ವರದಿ ಅನುಸಾರ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದರು.</p>.<p>ಮಂಡಳಿಯ ಕಾರ್ಯದರ್ಶಿ ಸುಬೋಧ್ ಯಾದವ, ವಿಧಾನ ಪರಿಷತ್ ಸದಸ್ಯರಾದ ವಿಜಯ ಸಿಂಗ್, ಅರವಿಂದ ಅರಳಿ, ಬೀದರ್<br />ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಿ ಶೇರಿಕಾರ ಇದ್ದರು.</p>.<p><strong>37 ಖಾಲಿ ಹುದ್ದೆ</strong></p>.<p>‘ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಒಟ್ಟು 83 ಮಂಜೂರಾದ ಹುದ್ದೆಗಳಿದ್ದು, ಅವುಗಳ ಪೈಕಿ 46 ಭರ್ತಿಯಾಗಿವೆ. ಇನ್ನೂ 37 ಹುದ್ದೆ ಖಾಲಿ ಇದ್ದು, ಇದರಿಂದ ಮಂಡಳಿಯ ಕಾಮಗಾರಿ ನಿಧಾನಗತಿಗೆ ಇದೂ ಕಾರಣವಾಗಿದೆ’ ಎಂದು ಸಚಿವರು ಹೇಳಿದರು.</p>.<p class="Briefhead"><strong>ಎಚ್ಕೆಆರ್ಡಿಬಿಯಿಂದ ಹಣ ವಿನಿಯೋಗ</strong></p>.<p>* ₹2,928.97 ಕೋಟಿ ವೆಚ್ಚ<br />* 13,623 ಅನುಮೋದನೆ ನೀಡಿರುವ ಕಾಮಗಾರಿ<br />* 8,462 ಪೂರ್ಣಗೊಂಡಿರುವ ಕಾಮಗಾರಿ<br />* 3,409 ಪ್ರಗತಿಯಲ್ಲಿರುವ ಕಾಮಗಾರಿ<br />* 1,752 ಪ್ರಾರಂಭಗೊಳ್ಳಬೇಕಿವ ಕಾಮಗಾರಿ<br />(2013–14ರಿಂದ ಈ ವರೆಗಿನ ಮಾಹಿತಿ)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಹೈದರಾಬಾದ್ ಕರ್ನಾಟಕ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಈ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಶಾಸಕರ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದು ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ, ಸಚಿವ ರಾಜಶೇಖರ ಬಿ.ಪಾಟೀಲ ಹುಮನಾಬಾದ್ ಹೇಳಿದರು.</p>.<p>ಮಂಡಳಿಯ ಅಧ್ಯಕ್ಷರಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ನಂತರ ಅವರು ಮಾತನಾಡಿದರು.</p>.<p>‘2018-19ನೇ ಸಾಲಿನ ಕ್ರಿಯಾ ಯೋಜನೆ ರೂಪಿಸಲು ಎಲ್ಲ ಜಿಲ್ಲೆಗಳಿಗೆ ತಿಳಿಸಲಾಗಿದೆ. ಬೀದರ್, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳ ಕ್ರಿಯಾ ಯೋಜನೆಗಳ ಸಲ್ಲಿಕೆ ಬಾಕಿದೆ. ಆದಷ್ಟು ಬೇಗ ಕ್ರಿಯಾ ಯೋಜನೆಗಳನ್ನು ಪಡೆದು ಅನುಮೋದನೆ ನೀಡಲಾಗುವುದು’ ಎಂದರು.</p>.<p>‘ಎಚ್ಕೆಆರ್ಡಿಬಿಯ ವ್ಯವಸ್ಥೆ ಬದಲಾಯಿಸಬೇಕಿದ್ದು, ಮುಖ್ಯಮಂತ್ರಿ ಅವರೊಂದಿಗೆ ಈ ನಿಟ್ಟಿನಲ್ಲಿ ಚರ್ಚಿಸಲಾಗಿದೆ. ಮಂಡಳಿಯ ಕಾರ್ಯದರ್ಶಿ ಅವರೊಂದಿಗೆ ಸಮಗ್ರವಾಗಿ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದರು.</p>.<p>‘ಎಚ್ಕೆಆರ್ಡಿಬಿ ರಚನೆಯಾದ ನಂತರ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ನಂಜುಂಡಪ್ಪ ವರದಿ ಅನುಸಾರ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದರು.</p>.<p>ಮಂಡಳಿಯ ಕಾರ್ಯದರ್ಶಿ ಸುಬೋಧ್ ಯಾದವ, ವಿಧಾನ ಪರಿಷತ್ ಸದಸ್ಯರಾದ ವಿಜಯ ಸಿಂಗ್, ಅರವಿಂದ ಅರಳಿ, ಬೀದರ್<br />ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾರತಿ ಶೇರಿಕಾರ ಇದ್ದರು.</p>.<p><strong>37 ಖಾಲಿ ಹುದ್ದೆ</strong></p>.<p>‘ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಒಟ್ಟು 83 ಮಂಜೂರಾದ ಹುದ್ದೆಗಳಿದ್ದು, ಅವುಗಳ ಪೈಕಿ 46 ಭರ್ತಿಯಾಗಿವೆ. ಇನ್ನೂ 37 ಹುದ್ದೆ ಖಾಲಿ ಇದ್ದು, ಇದರಿಂದ ಮಂಡಳಿಯ ಕಾಮಗಾರಿ ನಿಧಾನಗತಿಗೆ ಇದೂ ಕಾರಣವಾಗಿದೆ’ ಎಂದು ಸಚಿವರು ಹೇಳಿದರು.</p>.<p class="Briefhead"><strong>ಎಚ್ಕೆಆರ್ಡಿಬಿಯಿಂದ ಹಣ ವಿನಿಯೋಗ</strong></p>.<p>* ₹2,928.97 ಕೋಟಿ ವೆಚ್ಚ<br />* 13,623 ಅನುಮೋದನೆ ನೀಡಿರುವ ಕಾಮಗಾರಿ<br />* 8,462 ಪೂರ್ಣಗೊಂಡಿರುವ ಕಾಮಗಾರಿ<br />* 3,409 ಪ್ರಗತಿಯಲ್ಲಿರುವ ಕಾಮಗಾರಿ<br />* 1,752 ಪ್ರಾರಂಭಗೊಳ್ಳಬೇಕಿವ ಕಾಮಗಾರಿ<br />(2013–14ರಿಂದ ಈ ವರೆಗಿನ ಮಾಹಿತಿ)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>