ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿಕ ಸಮಾಜ ಜಿಲ್ಲಾಧ್ಯಕ್ಷ ಸಿದ್ರಾಮಪ್ಪಗೆ ರಾಜ್ಯೋತ್ಸವ ಪ್ರಶಸ್ತಿ

Last Updated 28 ಅಕ್ಟೋಬರ್ 2020, 8:41 IST
ಅಕ್ಷರ ಗಾತ್ರ

ಕಲಬುರ್ಗಿ: ಕಳೆದ 28 ವರ್ಷಗಳಿಂದ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾಗಿರುವ ಸಿದ್ರಾಮಪ್ಪ ಪಾಟೀಲ ಧಂಗಾಪುರ ಅವರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ.

ಕೃಷಿ ಕ್ಷೇತ್ರದಲ್ಲಿನ ಸೇವೆ ಹಾಗೂ ರೈತಪರ ಕಾಳಜಿಯ ಕಾರಣ ಅವರಿಗೆ ಈ ಪ್ರಶಸ್ತಿ ಬಂದಿದೆ. ಇದೂ ಜಿಲ್ಲೆಗೆ ಈ ಬಾರಿ ದೊರೆತ ಏಕೈಕ ಗೌರವ ಕೂಡ ಹೌದು.

1995ರಲ್ಲಿ ಜನತಾ ದಳ ಸರ್ಕಾರ ಇದ್ದಾಗ ಕರ್ನಾಟಕ ಕೃಷಿಕ ಸಮಾಜದ ರಾಜ್ಯ ಘಟಕದ ಅಧ್ಯಕ್ಷರಾಗಿ, ಅಖಿಲ ಭಾರತ ಕೃಷಿಕ ಸಮಾಜದ ಆಡಳಿತ ಮಂಡಳಿ ಸದಸ್ಯರಾಗಿ ಸಿದ್ರಾಮಪ್ಪ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನೂರಾರು ಕಾರ್ಯಕ್ರಮಗಳನ್ನು ಮಾಡಿದ್ದಾರೆ.

ಮುಖ್ಯವಾಗಿ ಬಜೆಟ್ ಸಂದರ್ಭದಲ್ಲಿ ರೈತರೊಂದಿಗೆ ಮುಖ್ಯಮಂತ್ರಿ ನಡೆಸಲಾಗುವ ಅಭಿಪ್ರಾಯ ಸಂಗ್ರಹದ ಸಭೆಯಲ್ಲಿ ಸಿದ್ರಾಮಪ್ಪ ಅವರು ನೀಡಿರುವ ಸಲಹೆಗಳನ್ನು ಕಾರ್ಯಾನುಷ್ಠಾನಕ್ಕೆ ತಂದ ಉದಾಹರಣೆಗಳಿವೆ.

ಪ್ರಸ್ತುತ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಅವರಿಗೆ ಈಗ 74 ವಯಸ್ಸು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT