<p><strong>ಕಲಬುರ್ಗಿ:</strong> ಕಳೆದ 28 ವರ್ಷಗಳಿಂದ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾಗಿರುವ ಸಿದ್ರಾಮಪ್ಪ ಪಾಟೀಲ ಧಂಗಾಪುರ ಅವರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ.</p>.<p>ಕೃಷಿ ಕ್ಷೇತ್ರದಲ್ಲಿನ ಸೇವೆ ಹಾಗೂ ರೈತಪರ ಕಾಳಜಿಯ ಕಾರಣ ಅವರಿಗೆ ಈ ಪ್ರಶಸ್ತಿ ಬಂದಿದೆ. ಇದೂ ಜಿಲ್ಲೆಗೆ ಈ ಬಾರಿ ದೊರೆತ ಏಕೈಕ ಗೌರವ ಕೂಡ ಹೌದು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/state-government-has-announced-rajyotsava-awards-2020-774403.html" target="_blank">65 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ</a></strong></p>.<p>1995ರಲ್ಲಿ ಜನತಾ ದಳ ಸರ್ಕಾರ ಇದ್ದಾಗ ಕರ್ನಾಟಕ ಕೃಷಿಕ ಸಮಾಜದ ರಾಜ್ಯ ಘಟಕದ ಅಧ್ಯಕ್ಷರಾಗಿ, ಅಖಿಲ ಭಾರತ ಕೃಷಿಕ ಸಮಾಜದ ಆಡಳಿತ ಮಂಡಳಿ ಸದಸ್ಯರಾಗಿ ಸಿದ್ರಾಮಪ್ಪ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನೂರಾರು ಕಾರ್ಯಕ್ರಮಗಳನ್ನು ಮಾಡಿದ್ದಾರೆ.</p>.<p>ಮುಖ್ಯವಾಗಿ ಬಜೆಟ್ ಸಂದರ್ಭದಲ್ಲಿ ರೈತರೊಂದಿಗೆ ಮುಖ್ಯಮಂತ್ರಿ ನಡೆಸಲಾಗುವ ಅಭಿಪ್ರಾಯ ಸಂಗ್ರಹದ ಸಭೆಯಲ್ಲಿ ಸಿದ್ರಾಮಪ್ಪ ಅವರು ನೀಡಿರುವ ಸಲಹೆಗಳನ್ನು ಕಾರ್ಯಾನುಷ್ಠಾನಕ್ಕೆ ತಂದ ಉದಾಹರಣೆಗಳಿವೆ.</p>.<p>ಪ್ರಸ್ತುತ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಅವರಿಗೆ ಈಗ 74 ವಯಸ್ಸು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಕಳೆದ 28 ವರ್ಷಗಳಿಂದ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾಗಿರುವ ಸಿದ್ರಾಮಪ್ಪ ಪಾಟೀಲ ಧಂಗಾಪುರ ಅವರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ.</p>.<p>ಕೃಷಿ ಕ್ಷೇತ್ರದಲ್ಲಿನ ಸೇವೆ ಹಾಗೂ ರೈತಪರ ಕಾಳಜಿಯ ಕಾರಣ ಅವರಿಗೆ ಈ ಪ್ರಶಸ್ತಿ ಬಂದಿದೆ. ಇದೂ ಜಿಲ್ಲೆಗೆ ಈ ಬಾರಿ ದೊರೆತ ಏಕೈಕ ಗೌರವ ಕೂಡ ಹೌದು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/state-government-has-announced-rajyotsava-awards-2020-774403.html" target="_blank">65 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ</a></strong></p>.<p>1995ರಲ್ಲಿ ಜನತಾ ದಳ ಸರ್ಕಾರ ಇದ್ದಾಗ ಕರ್ನಾಟಕ ಕೃಷಿಕ ಸಮಾಜದ ರಾಜ್ಯ ಘಟಕದ ಅಧ್ಯಕ್ಷರಾಗಿ, ಅಖಿಲ ಭಾರತ ಕೃಷಿಕ ಸಮಾಜದ ಆಡಳಿತ ಮಂಡಳಿ ಸದಸ್ಯರಾಗಿ ಸಿದ್ರಾಮಪ್ಪ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನೂರಾರು ಕಾರ್ಯಕ್ರಮಗಳನ್ನು ಮಾಡಿದ್ದಾರೆ.</p>.<p>ಮುಖ್ಯವಾಗಿ ಬಜೆಟ್ ಸಂದರ್ಭದಲ್ಲಿ ರೈತರೊಂದಿಗೆ ಮುಖ್ಯಮಂತ್ರಿ ನಡೆಸಲಾಗುವ ಅಭಿಪ್ರಾಯ ಸಂಗ್ರಹದ ಸಭೆಯಲ್ಲಿ ಸಿದ್ರಾಮಪ್ಪ ಅವರು ನೀಡಿರುವ ಸಲಹೆಗಳನ್ನು ಕಾರ್ಯಾನುಷ್ಠಾನಕ್ಕೆ ತಂದ ಉದಾಹರಣೆಗಳಿವೆ.</p>.<p>ಪ್ರಸ್ತುತ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಅವರಿಗೆ ಈಗ 74 ವಯಸ್ಸು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>