‘₹ 12 ಕೋಟಿ ವಿನಿಯೋಗ ಮಾಡಿ ಸದಾಶಿವ ಆಯೋಗವು ಸಮೀಕ್ಷೆ ಮೂಲಕ ವರದಿ ತಯಾರಿಸಿದೆ. ಯಾವುದೇ ಜಾತಿಗಳನ್ನು ಪಟ್ಟಿಯಿಂದ ಕೈಬಿಡುವುದಾಗಲಿ ಅಥವಾ ಸೇರಿಸುವ ಕುರಿಯಾಗಲಿ ವರದಿಯಲ್ಲಿ ಪ್ರಸ್ತಾಪಿಸಿಲ್ಲ. ಆದರೂ, ವರದಿ ತಯಾರಿಕೆ ಅವೈಜ್ಞಾನಿಕ ಮತ್ತು ಅಸಾಂವಿಧಾನಿಕ ಎಂದು ವಾದಿಸಿ, ಅವಮಾನ ಮಾಡಲಾಗುತ್ತಿದೆ. ಪರಿಶಿಷ್ಟ ಜಾತಿಗಳಲ್ಲಿಯೇ ಸಾಕಷ್ಟು ವೈರುಧ್ಯಗಳು ಇದೆ. ಹಾಗೆಯೇ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕತೆಯಲ್ಲಿ ತುಂಬಾ ವ್ಯಾತ್ಯಾಸ ಇದೆ. ಆದ್ದರಿಂದ ಜನಸಂಖ್ಯೆಗೆ ಅನುಗುಣವಾಗಿ ಶೇ 15ರಷ್ಟು ಮೀಸಲಾತಿಯಲ್ಲಿ ನ್ಯಾಯಬದ್ಧವಾಗಿ ಒಳ ಮೀಸಲಾತಿ ನಿಗದಿ ಪಡಿಸುವ ನ್ಯಾ.ಸದಾಶಿವ ವರದಿಯಿಂದ ಮಾತ್ರ ಸಾಧ್ಯ. ರಾಜ್ಯ ಸರ್ಕಾರವು ಕೂಡಲೇ ಕೇಂದ್ರಕ್ಕೆ ಶಿಫಾರಸು ಮಾಡಬೇಕು’ ಎಂದೂ ಒತ್ತಾಯಿಸಿದರು.