<p><strong>ಚಿಂಚೋಳಿ</strong>: ಜ.22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳಲಿರುವ ಹಿನ್ನೆಲೆಯಲ್ಲಿ ಶನಿವಾರ ಪಟ್ಟಣದಲ್ಲಿ ಭಜನೆ, ಪಲ್ಲಕ್ಕಿ ಉತ್ಸವ ಹಾಗೂ ರಾಮ–ಸೀತೆ ವೇಷಧಾರಿ ಮಕ್ಕಳ ಮೆರವಣಿಗೆ, ಭಜನೆಯೊಂದಿಗೆ ಶೋಭಾ ಯಾತ್ರೆ ವೈಭವದಿಂದ ಜರುಗಿತು.</p>.<p>ಚಂದನಕೇರಾ ಬೃಂಗಿ ಪಾಚೇಶ್ವರ ಕಟ್ಟಿಮಠದ ಅಭಿನವ ರಾಚೋಟೇಶ್ವರ ಶಿವಾಚಾರ್ಯರು ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿಶ್ವಹಿಂದೂ ಪರಿಷತ್ತಿನ ನೂರಾರು ಮುಖಂಡರು ಪಾಲ್ಗೊಂಡಿದ್ದರು.</p>.<p>ಪಟ್ಟಣದ ಬಸ್ ನಿಲ್ದಾಣದ ಎದುರುಗಡೆಯಿಂದ ಪ್ರಾರಂಭವಾದ ಶೋಭಾಯಾತ್ರೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಹಾಂತೇಶ್ವರ ಮಠ ತಲುಪಿ ಅಲ್ಲಿ ಬಹಿರಂಗ ಸಭೆ ನಡೆಸಿದರು.</p>.<p>ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಅಶೋಕ ಪಾಟೀಲ ಮಾತನಾಡಿದರು. </p>.<p>ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯೆ ರಾಧಾಬಾಯಿ ಓಲಗೇರಿ, ನಿವೃತ್ತ ಶಿಕ್ಷಕಿ ಶ್ರೀದೇವಿ ಪಾಟೀಲ, ಹಿರಿಯರಾದ ಸಂಜಯ ಮಿಷ್ಕಿನ್, ಭೀಮಶೆಟ್ಟಿ ಮುರುಡಾ, ರೇವಣಸಿದ್ದ ಮೋಘಾ, ಹರ್ಷವರ್ಧನ ಮ್ಯಾಕಲ್, ಮಲ್ಲಿಕಾರ್ಜುನ ಉಡುಪಿ, ರಾಮರಡ್ಡಿ ಪಾಟೀಲ, ಅಶೋಕ ಚವ್ಹಾಣ, ಸತೀಶರಡ್ಡಿ ತಾಜಲಾಪುರ, ಶ್ರೀನಿವಾಸ ಚಿಂಚೋಳಿಕರ್, ರವಿಕಾಂತ ಹುಸೇಬಾಯಿ, ಕಾಶಿನಾಥ ನಾಟಿಕಾರ, ಶ್ರೀಹರಿ ಕಾಟಾಪುರ, ಶಿವಯೋಗಿ ರುಸ್ತಂಪುರ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ</strong>: ಜ.22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳಲಿರುವ ಹಿನ್ನೆಲೆಯಲ್ಲಿ ಶನಿವಾರ ಪಟ್ಟಣದಲ್ಲಿ ಭಜನೆ, ಪಲ್ಲಕ್ಕಿ ಉತ್ಸವ ಹಾಗೂ ರಾಮ–ಸೀತೆ ವೇಷಧಾರಿ ಮಕ್ಕಳ ಮೆರವಣಿಗೆ, ಭಜನೆಯೊಂದಿಗೆ ಶೋಭಾ ಯಾತ್ರೆ ವೈಭವದಿಂದ ಜರುಗಿತು.</p>.<p>ಚಂದನಕೇರಾ ಬೃಂಗಿ ಪಾಚೇಶ್ವರ ಕಟ್ಟಿಮಠದ ಅಭಿನವ ರಾಚೋಟೇಶ್ವರ ಶಿವಾಚಾರ್ಯರು ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿಶ್ವಹಿಂದೂ ಪರಿಷತ್ತಿನ ನೂರಾರು ಮುಖಂಡರು ಪಾಲ್ಗೊಂಡಿದ್ದರು.</p>.<p>ಪಟ್ಟಣದ ಬಸ್ ನಿಲ್ದಾಣದ ಎದುರುಗಡೆಯಿಂದ ಪ್ರಾರಂಭವಾದ ಶೋಭಾಯಾತ್ರೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಹಾಂತೇಶ್ವರ ಮಠ ತಲುಪಿ ಅಲ್ಲಿ ಬಹಿರಂಗ ಸಭೆ ನಡೆಸಿದರು.</p>.<p>ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಅಶೋಕ ಪಾಟೀಲ ಮಾತನಾಡಿದರು. </p>.<p>ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯೆ ರಾಧಾಬಾಯಿ ಓಲಗೇರಿ, ನಿವೃತ್ತ ಶಿಕ್ಷಕಿ ಶ್ರೀದೇವಿ ಪಾಟೀಲ, ಹಿರಿಯರಾದ ಸಂಜಯ ಮಿಷ್ಕಿನ್, ಭೀಮಶೆಟ್ಟಿ ಮುರುಡಾ, ರೇವಣಸಿದ್ದ ಮೋಘಾ, ಹರ್ಷವರ್ಧನ ಮ್ಯಾಕಲ್, ಮಲ್ಲಿಕಾರ್ಜುನ ಉಡುಪಿ, ರಾಮರಡ್ಡಿ ಪಾಟೀಲ, ಅಶೋಕ ಚವ್ಹಾಣ, ಸತೀಶರಡ್ಡಿ ತಾಜಲಾಪುರ, ಶ್ರೀನಿವಾಸ ಚಿಂಚೋಳಿಕರ್, ರವಿಕಾಂತ ಹುಸೇಬಾಯಿ, ಕಾಶಿನಾಥ ನಾಟಿಕಾರ, ಶ್ರೀಹರಿ ಕಾಟಾಪುರ, ಶಿವಯೋಗಿ ರುಸ್ತಂಪುರ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>