ಇದಕ್ಕೂ ಮುನ್ನ ಪ್ರಾಸ್ತಾವಿಕವಾಗಿ ಮಾತನಾಡಿದ ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ, ‘ನಿಜಾಮರ ಆಳ್ವಿಕೆಗೆ ಒಳಪಟ್ಟಿದ್ದ ಕಲ್ಯಾಣ ಕರ್ನಾಟಕದ ಹೋರಾಟದ ಇತಿಹಾಸವನ್ನು ರಾಜ್ಯದ ಜನರಿಗೆ ತಿಳಿಸುವ ಉದ್ದೇಶದಿಂದ ಮಲೆಗಳಲ್ಲಿ ಮದುಮಗಳು, ಪರ್ವ ಮಾದರಿಯನ್ನು ಬೃಹತ್ ನಾಟಕವನ್ನು ಕಲಾವಿದರು ತಯಾರಿಸುತ್ತಿದ್ದಾರೆ. ಇದನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಪ್ರದರ್ಶಿಸುವ ಉದ್ದೇಶವಿದ್ದು, ಇಲಾಖೆಯಿಂದ ಅನುದಾನ ಕೊಡಬೇಕು’ ಎಂದು ಮನವಿ ಮಾಡಿದರು.