ಕಲಬುರ್ಗಿ: ಅಫಜಲಪುರ ತಾಲ್ಲೂಕಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿ ಶವವನ್ನು ಸುಟ್ಟು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಕನನ್ನು ಬಂಧಿಸಿರುವ ಪೊಲೀಸರು, ಐವರು ಕಾನೂನು ಸಂಘರ್ಷಕ್ಕೆ ಒಳ ಗಾದ ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ.
ಕೃಷ್ಣ ತಳವಾರ್ (21) ಬಂಧಿತ ಆರೋಪಿ. ಎಲ್ಲರೂ ಗಾಣಗಾಪುರ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಫೆ.24ರಂದು ಮಹಿಳೆಯನ್ನು ಆಟೊದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದ ಆರೋಪಿಗಳು ನಂತರ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದರು.
ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳನ್ನು ಕಲಬುರ್ಗಿಯ ಬಾಲನ್ಯಾಯ ಮಂಡಳಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.