ಆಳಂದ ತಾಲ್ಲೂಕಿನ ಗ್ರಾಮವೊಂದರ ನಿವಾಸಿ ಧರ್ಮರಾಜ ಶ್ರೀಮಂತ ಘೋಡಕೆ ಶಿಕ್ಷೆಗೆ ಒಳಗಾದವರು. ಮುಂಬೈನಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತೆಯ ಪೋಷಕರು ತಮ್ಮ ಇಬ್ಬರು ಮಕ್ಕಳನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಓದಿಸುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಪಕ್ಕದ ಮನೆಯ ಧರ್ಮರಾಜ ಅವರು 13 ವರ್ಷದ ಬಾಲಕಿಯನ್ನು ಎಳೆದೊಯ್ದು ಜೀವ ಬೆದರಿಕೆ ಹಾಕಿ, ಅತ್ಯಾಚಾರ ಎಸಗಿದ್ದ. ಸಂತ್ರಸ್ತೆ ಬಾಲಕಿ ಈ ಬಗ್ಗೆ ಕುಟುಂಬಸ್ಥರಿಗೆ ತಿಳಿಸಿದ್ದಳು.