ಕಲಬುರಗಿ: ‘ಸ್ವಸ್ಥ ಸುಸ್ಥಿರ ಸಮಾಜ ನಿರ್ಮಾಣದ ಧ್ಯೇಯದೊಂದಿಗೆ ರಾಷ್ಟ್ರೋತ್ಥಾನ ಶಾಲೆಗಳನ್ನು ನಡೆಸಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಒಂದು ಮಾದರಿ ಶಾಲೆ ನಿರ್ಮಿಸಿ ಅವುಗಳ ಮೂಲಕ ಪರಿಷತ್ತಿನ ಹಲವಾರು ಪ್ರಕಲ್ಪಗಳನ್ನು ರಾಜ್ಯದ ಕೊನೆಯ ಗ್ರಾಮಕ್ಕೂ ತಲುಪಿಸುವ ಪ್ರಯತ್ನದಲ್ಲಿದ್ದೇವೆ‘ ಎಂದು ರಾಷ್ಟ್ರೋತ್ಥಾನ ಪರಿಷತ್ತಿನ ಉಪಾಧ್ಯಕ್ಷ ದ್ವಾರಕಾನಾಥ್ ತಿಳಿಸಿದರು.