ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಡಿತರ ಧಾನ್ಯ ವಿತರಣೆ

Last Updated 3 ಜುಲೈ 2021, 2:17 IST
ಅಕ್ಷರ ಗಾತ್ರ

ಕಲಬುರ್ಗಿ: ಕೋವಿಡ್‌ ತುರ್ತು ಪರಿಸ್ಥಿತಿಯ ಕಾರಣ ಜಿಲ್ಲೆಯ ಎಎವೈ/ ಅಂತ್ಯೋದಯ ಅನ್ನ, ಪಿ.ಎಚ್.ಎಚ್./ ಆದ್ಯತಾ ಹಾಗೂ ಎ.ಪಿ.ಎಲ್. (ಆದ್ಯತೇತರ) ಪಡಿತರ ಚೀಟಿ ಕಾರ್ಡುದಾರರಿಗೆ ಜುಲೈ ತಿಂಗಳ ಆಹಾರಧಾನ್ಯಗಳನ್ನು ವಿತರಿಸಲಾಗುತ್ತಿದೆ.

ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಧಾನ್ಯವನ್ನು ಪಡೆಯಬಹುದು. ಜಿಲ್ಲೆಯ 63,459 ಎಎವೈ ಪಡಿತರ ಚೀಟಿಗಳ 2,64,260 ಸದಸ್ಯರಿಗೆ ಮತ್ತು 4,89,100 ಪಿ.ಎಚ್.ಎಚ್. ಪಡಿತರ ಚೀಟಿಗಳ 16,60,428 ಸದಸ್ಯರಿಗೆ ಹಾಗೂ 18,263 ಎ.ಪಿ.ಎಲ್. (ವಿಲ್ಲಿಂಗ್‍ನೆಸ್) ಪಡಿತರ ಕಾರ್ಡುದಾರರಿಗೆ ಧಾನ್ಯ ವಿತರಿಸಲಾಗುತ್ತಿದೆ.

ಪಡಿತರ ಚೀಟಿಯ ಮಾದರಿ ಹಾಗೂ ಧಾನ್ಯ ವಿತರಣಾ ಪ್ರಮಾಣ ಈ ಕೆಳಗಿನಂತಿದೆ.

ಎಎವೈ/ ಅಂತ್ಯೋದಯ ಅನ್ನ ಪಡಿತರ ಚೀಟಿ: ಪ್ರತಿ ಪಡಿತರ ಚೀಟಿ ಸದಸ್ಯರಿಗೆ 20 ಕೆ.ಜಿ. ಜೋಳ, 15 ಕೆ.ಜಿ. ಅಕ್ಕಿ ಹಾಗೂ 5 ಕೆ.ಜಿ ಅಕ್ಕಿ ಉಚಿತ ವಿತರಣೆ.

ಪಿ.ಎಚ್.ಎಚ್/ ಆದ್ಯತಾ: 3 ಕೆ.ಜಿ. ಜೋಳ, 2 ಕೆ.ಜಿ ಅಕ್ಕಿ, 5 ಕೆ.ಜಿ ಅಕ್ಕಿ, 2 ಕೆ.ಜಿ. ಗೋಧಿ ಉಚಿತವಾಗಿ ನೀಡಲಾಗುವುದು.

ಎಪಿಎಲ್ /ಆದ್ಯತೇತರ: ಏಕಸದಸ್ಯ ಇರುವ ಪಡಿತರ ಚೀಟಿಗೆ 5 ಕೆ.ಜಿ ಅಕ್ಕಿ ಮತ್ತು ಒಂದಕ್ಕಿಂತ ಹೆಚ್ಚು ಸದಸ್ಯರಿರುವ ಪಡಿತರ ಚೀಟಿಗೆ 10 ಕೆ.ಜಿ ಅಕ್ಕಿಯನ್ನು ಪ್ರತಿ ಕೆ.ಜಿ.ಗೆ ದರ ₹ 15ರಂತೆ ವಿತರಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT