ಇನ್ನೂ ಪಡಿತರ ಚೀಟಿದಾರರ ಕುಟುಂಬದ ಸದಸ್ಯರಲ್ಲಿ ಯಾರ ಬಳಿಯೂ ಮೊಬೈಲ್ ಇಲ್ಲದೇ ಹೋದಲ್ಲಿ ಅಂತಹ ಪ್ರಕರಣಗಳಲ್ಲಿ ಪಡಿತರ ಚೀಟಿದಾರರಿಗೆ ಈಗಾಗಲೇ ಲಭ್ಯವಿರುವ ಬಯೊಮೆಟ್ರಿಕ್ ಆಧಾರಿತವೇ ಪಡಿತರ ವಿತರಣೆ ಮಾಡಬೇಕು. ಬಯೊ ಮೆಟ್ರಿಕ್ ಆಧಾರದ ಮೇಲೆ ಪಡಿತರ ನೀಡುವ ಸಂದರ್ಭದಲ್ಲಿ ಶುಚಿತ್ವ ಕಾಪಾಡುವ ಸಂಬಂಧ ನ್ಯಾಯಬೆಲೆ ಅಂಗಡಿಗಳಲ್ಲಿ ನೀರು, ಸಾಬೂನು ಅಥವಾ ಸ್ಯಾನಿಟೈಸರ್ ಕಡ್ಡಾಯವಾಗಿ ಇಡಬೇಕು. ಪಡಿತರ ಚೀಟಿದಾರರು ಬೆರಳಚ್ಚು ನೀಡುವ ಮುನ್ನ ಕೈಯನ್ನು ಶುದ್ಧವಾಗಿ ತೊಳೆದುಕೊಳ್ಳಲು ಮತ್ತು ಬಯೊಮೆಟ್ರಿಕ್ ಯಂತ್ರದ ಸುತ್ತಮುತ್ತ ಶುಚಿತ್ವ ಕಾಪಾಡಬೇಕು ಎಂದು ಪಡಿತರ ಅಂಗಡಿದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.